ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಖಾಸಗಿ ವಾಹನಗಳನ್ನು ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ಆಸ್ಪತ್ರೆಗೆ ಬರುವ ರೋಗಿಗಳಿಗೆ ತೊಂದರೆಯಾಗುತ್ತಿದ್ದು, ಸಂಬಂಧಪಟ್ಟ ಪೊಲೀಸ್ ಇಲಾಖೆ ಸೂಕ್ತ ಕ್ರಮ ವಹಿಸುವಂತೆ ಪ್ರಜ್ಞಾವಂತ ನಾಗರಿಕರು ಮನವಿ ಮಾಡಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ವಾರಂತ್ಯದ ರಜಾ ದಿನಗಳಲ್ಲಿ ಹಾಗೂ ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತಾದಿಗಳು ನೂರಾರು ಖಾಸಗಿ ವಾಹನಗಳಲ್ಲಿ ಆಗಮಿಸುತ್ತಾರೆ.
ಈ ವೇಳೆ ನಿಗದಿತ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸುವ ಬದಲು ಹಣ ಉಳಿತಾಯ ಮಾಡಲು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ವಾಹನಗಳನ್ನು ನಿಲ್ಲಿಸುತ್ತಿದ್ದಾರೆ. ಇದರಿಂದ ಪ್ರತಿನಿತ್ಯ ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾದಚಾರಿಗಳಿಗೆ ನಿರಂತರವಾಗಿ ತೊಂದರೆಯಾಗುತ್ತಿದೆ. ಈ ಬಗ್ಗೆ ಸ್ಥಳೀಯ ನಿವಾಸಿಗಳು ಹಲವಾರು ಬಾರಿ ಸಾಮಾಜಿಕ ಜಾಲತಾಣದ ಮೂಲಕ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದ್ದಾರೆ.
ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಲೆ ಮಹದೇಶ್ವರ ಬೆಟ್ಟ ಸುತ್ತಮುತ್ತಲಿನ 18 ಹಳ್ಳಿಗಳ ನಿವಾಸಿಗಳು ಹೆರಿಗೆ, ಅನಾರೋಗ್ಯ, ಅಪಘಾತ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ಪಡೆಯಲು ಆಗಮಿಸುತ್ತಾರೆ. ಆದರೆ ಖಾಸಗಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುತ್ತಿರುವುದರಿಂದ ಆಸ್ಪತ್ರೆಗೆ ಬರುವ ರೋಗಿಗಳು ತಮ್ಮ ದ್ವಿಚಕ್ರ ವಾಹನಗಳನ್ನು ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಈ ರಸ್ತೆಯ ಮೂಲಕ ಬಸ್ ನಿಲ್ದಾಣ, ನಾಗಮಲೆ ಭವನ ಗಿರಿ ದರ್ಶನಿ, ಪೆಟ್ರೋಲ್ ಬಂಕ್ ಗೆ ತೆರಳಬೇಕಿದೆ.
ಶನಿವಾರ ಆಸ್ಪತ್ರೆಗೆ ತೆರಳಿದ್ದ ರೋಗಿ ಒಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಆಂಬುಲೆನ್ಸ್ ಮೂಲಕ ಕರೆದೊಯ್ಯುತ್ತಿದ್ದಾಗ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿದ್ದರಿಂದ ಚಾಲಕ ಮುಂದೆ ಹೋಗಲು ಪರದಾಡಬೇಕಾಯಿತು. ಇದರಿಂದ ರೋಗಿಯು ವಾಹನದಲ್ಲಿ ನರಳಾಡುವ ಪರಿಸ್ಥಿತಿ ಉದ್ಭವವಾಗಿತ್ತು.
ಇನ್ನು ಮುಂದಾದರೂ ಸಂಬಂಧಪಟ್ಟ ಪೊಲೀಸ್ ಇಲಾಖೆ ಪ್ರಾಥಮಿಕ ಆರೋಗ್ಯ ಕೇಂದ್ರ ಮುಂಭಾಗ ನಿಲ್ಲುವ ವಾಹನ ಸವಾರರಿಗೆ ಕಾನೂನು ಕ್ರಮ ಕೈಗೊಂಡು ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸ್ಥಳೀಯ ನಿವಾಸಿ ಚಿರಂಜೀವಿ ಆಗ್ರಹಿಸಿದ್ದಾರೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…