ಗುಂಡ್ಲುಪೇಟೆ: ಪಾರ್ವತಮ್ಮ ರಾಜ್ಕುಮಾರ್ ತಮ್ಮನ ಮಗ ನಟ ಸೂರಜ್ಗೆ ಭೀಕರವಾದ ಅಪಘಾತದಲ್ಲಿ ಕಾಲಿಗೆ ತೀವ್ರವಾಗಿ ಪೆಟ್ಟಾಗಿದೆ. ಈ ಪರಿಣಾಮವಾಗಿ ಕಾಲು ಕತ್ತರಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೈಸೂರಿನ ಸರಸ್ವತಿಪುರಂ ನಿವಾಸಿ ಧೀರಜ್ (28) ತೀವ್ರವಾಗಿ ಗಾಯಗೊಂಡಿದ್ದಾರೆ. ಶನಿವಾರ (ಜೂನ್ 24) ಸಂಜೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಸೂರಜ್ ಅವರು ಬೈಕ್ನಲ್ಲಿ ಊಟಿಗೆ ತೆರಳುತ್ತಿದ್ದರು. ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿಯೊಂದು ಮೈಸೂರು ಕಡೆಯಿಂದ ಬರುತ್ತಿದ್ದ ಬುಲೆಟ್ ಬೈಕ್ಗೆ ಡಿಕ್ಕಿ ಸಂಭವಿಸಿದೆ. ಈ ವೇಳೆ ಅವರ ಕಾಲಿನ ಮೇಲೆ ಟಿಪ್ಪರ್ ಹರಿದಿದೆ. ಅವರ ಬಲಗಾಲು ಸಂಪೂರ್ಣ ನಜ್ಜುಗುಜ್ಜಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಕಾಲಿಗೆ ತೀವ್ರ ಪೆಟ್ಟಾಗಿದ್ದರಿಂದ ಬಲಗಾಲು ಕತ್ತರಿಸಲಾಗಿದೆ ಎನ್ನಲಾಗಿದೆ.
ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವರಾಜ್ಕುಮಾರ್ ಹಾಗೂ ಕುಟುಂಬಸ್ಥರು ಮೈಸೂರಿನ ಆಸ್ಪತ್ರೆಯತ್ತ ತೆರಳಿದ್ದಾರೆ.
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…
ಸ್ಥಾನ...ಮಾನ ! ಅಳೆದೂ ಸುರಿದು ಅಲ್ಲಿಂದಿಲ್ಲಿಗೆ ಓಡಾಡಿ ಕೊಟ್ಟೂ ಕೊಡಲಾಗದೆ ಬಿಟ್ಟೂ ಇರಲಾಗದೆ ಉಳಿಸಿಕೊಂಡಿರುವುದು ಒಂದೇ ಒಂದು ಮಂತ್ರಿ ಸ್ಥಾನ…
ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದ ಮಂತ್ರಿಮಂಡಲ ವಿಸ್ತರಣೆಯಾಗಿ ೨೦ ಸ್ಥಾನಗಳ ಪೈಕಿ ೧೯ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ…