ಹನೂರು: ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ಪಟ್ಟಲದಮ್ಮ ದೇವಸ್ಥಾನಕ್ಕೆ ಮಾಜಿ ಶಾಸಕ ಆರ್.ನರೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಈ ದೇವಸ್ಥಾನದಲ್ಲಿ ಪ್ರತಿ ಹನ್ನೆರಡು ವರ್ಷಗಳಿಗೊಮ್ಮೆ ಕುಂಭಾಭಿಷೇಕ ಸೇರಿದಂತೆ ವಿಶೇಷ ಪೂಜೆ ನಡೆಯುತ್ತದೆ.
ಆಧುನಿಕ ಜಗತ್ತಿನಲ್ಲಿ ನಾವು ಎಷ್ಟೇ ವೇಗವಾಗಿ ಬೆಳೆಯುತ್ತಿದ್ದರೂ, ಧಾರ್ಮಿಕವಾಗಿ ದೇವಸ್ಥಾನಗಳನ್ನು ನಿರ್ಮಾಣ ಮಾಡಿ ಶಾಂತಿ, ನೆಮ್ಮದಿ ಕಂಡುಕೊಳ್ಳುತ್ತಿದ್ದೇವೆ.
ಪ್ರತಿಯೊಂದು ಗ್ರಾಮಗಳಲ್ಲಿ ಕನಿಷ್ಠ ಮೂರರಿಂದ ನಾಲ್ಕು ದೇವಸ್ಥಾನಗಳಿವೆ. ಪ್ರತಿಯೊಬ್ಬರು ಒಂದೊಂದು ದೇವರ ಮೇಲೆ ನಂಬಿಕೆಯಿಟ್ಟು ಪೂಜೆ ಮಾಡುತ್ತಾರೆ.
ಹನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಮಾಜದವರಿದ್ದು, ಎಲ್ಲರೂ ಒಗ್ಗಟ್ಟಾಗಿ ಪ್ರತಿಯೊಂದು ದೇವರುಗಳನ್ನು ಪೂಜೆ ಮಾಡುತ್ತಾರೆ.
ನಾನು ಶಾಸಕನಾಗಿದ್ದಾಗ ಹಲವಾರು ದೇವಸ್ಥಾನಗಳ ಅಭಿವೃದ್ಧಿಗೆ ಅನುದಾನ ನೀಡಿದ್ದೇನೆ. ಮುಂದೆಯೂ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡುತ್ತೇನೆ ಎಂದರು.
ಈ ವೇಳೆ ಹನೂರು ಪಟ್ಟಣ ಪಂಚಾಯಿತಿ ಸದಸ್ಯ ಗಿರೀಶ್, ಕೌದಳ್ಳಿ ಗ್ರಾಮ ಪಂಚಾಯಿತಿ ಸದಸ್ಯರಾದ ನಾಗರಾಜು, ವಾಜಿದ್, ಶಿವಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…