ಚಾಮರಾಜನಗರ

ಎಐ ಹುಲಿ ಹಾವಳಿಗೆ ಹೈರಾಣಾದ ಜನತೆ: ಕಿಡಿಗೇಡಿಗಳಿಗೆ ವಾರ್ನಿಂಗ್‌ ಕೊಟ್ಟ ಅರಣ್ಯ ಇಲಾಖೆ

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ.

ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಇದರಿಂದಲೂ ಆತಂಕಕ್ಕೆ ಒಳಗಾಗಿರುವ ರೈತರು, ಕಾಡುಪ್ರಾಣಿಗಳ ಹಾವಳಿಯಿಂದ ತಮ್ಮನ್ನು ಹಾಗೂ ಜಾನುವಾರುಗಳನ್ನು ರಕ್ಷಿಸುವುದು ಹೇಗೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ

ಇನ್ನು ಇತ್ತೀಚೆಗೆ ಬಹುತೇಕರು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿರುವ ವಿಡಿಯೋಗಳು ಎಐ ನಿರ್ಮಿತ ಎಂಬುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಿಡಿಗೇಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಹುಲಿಯ ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಸಮರಕ್ಕಿಳಿದಿದೆ. ಜೊತೆಗೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಹುಲಿ ಬಂತೆಂದು ಸುಳ್ಳು ಫೋಟೋ ಹಂಚುವುದರಿಂದ ಜನಸಾಮಾನ್ಯರಲ್ಲಿ ಭಯ ಸೃಷ್ಟಿಯಾಗುತ್ತಿದೆ. ಅಲ್ಲದೇ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯನಿರ್ವಹಣೆಗೂ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

38 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

49 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

3 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago