ಚಾಮರಾಜನಗರ

ಎಐ ಹುಲಿ ಹಾವಳಿಗೆ ಹೈರಾಣಾದ ಜನತೆ: ಕಿಡಿಗೇಡಿಗಳಿಗೆ ವಾರ್ನಿಂಗ್‌ ಕೊಟ್ಟ ಅರಣ್ಯ ಇಲಾಖೆ

ಚಾಮರಾಜನಗರ: ಕಾಡಂಚಿನ ಗ್ರಾಮಗಳಲ್ಲಿ ಇತ್ತೀಚೆಗೆ ಹುಲಿ ಹಾಗೂ ಚಿರತೆಗಳು ಹಾವಳಿ ಮಿತಿಮೀರಿದ್ದು, ಜಮೀನುಗಳಿಗೆ ತೆರಳಲು ರೈತರು ಭಯಪಡುತ್ತಿದ್ದಾರೆ.

ಈ ಆತಂಕದ ಮಧ್ಯೆ ಕಿಡಿಗೇಡಿಗಳು ಎಐ ತಂತ್ರಜ್ಞಾನದ ಮೂಲಕ ಹುಲಿ ಪ್ರತ್ಯಕ್ಷವಾಗಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುತ್ತಿದ್ದಾರೆ.

ಇದರಿಂದಲೂ ಆತಂಕಕ್ಕೆ ಒಳಗಾಗಿರುವ ರೈತರು, ಕಾಡುಪ್ರಾಣಿಗಳ ಹಾವಳಿಯಿಂದ ತಮ್ಮನ್ನು ಹಾಗೂ ಜಾನುವಾರುಗಳನ್ನು ರಕ್ಷಿಸುವುದು ಹೇಗೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ರಾಜ್ಯದಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ

ಇನ್ನು ಇತ್ತೀಚೆಗೆ ಬಹುತೇಕರು ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿರುವ ವಿಡಿಯೋಗಳು ಎಐ ನಿರ್ಮಿತ ಎಂಬುದು ಗೊತ್ತಾಗಿದೆ.

ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಿಡಿಗೇಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿದ್ದು, ಹುಲಿಯ ವಿಡಿಯೋ ಹರಿಬಿಡುತ್ತಿರುವವರ ವಿರುದ್ಧ ಸಮರಕ್ಕಿಳಿದಿದೆ. ಜೊತೆಗೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಹುಲಿ ಬಂತೆಂದು ಸುಳ್ಳು ಫೋಟೋ ಹಂಚುವುದರಿಂದ ಜನಸಾಮಾನ್ಯರಲ್ಲಿ ಭಯ ಸೃಷ್ಟಿಯಾಗುತ್ತಿದೆ. ಅಲ್ಲದೇ ಅರಣ್ಯ ಇಲಾಖೆಯ ಸಿಬ್ಬಂದಿ ಕಾರ್ಯನಿರ್ವಹಣೆಗೂ ಇದರಿಂದ ಸಮಸ್ಯೆಯಾಗುತ್ತಿದೆ ಎಂದು ಹೇಳಿದೆ.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

11 mins ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

16 mins ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

21 mins ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

27 mins ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

9 hours ago