ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಿಂದಲೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಶಾಸಕ ಎಂ ಆರ್ ಮಂಜುನಾಥ್ ತಿಳಿಸಿದರು
ಪಟ್ಟಣದ ಕೆ.ಎಸ್.ಆರ್.ಟಿ. ಸಿ ಬಸ್ ನಿಲ್ದಾಣದ ಆವರಣದಲ್ಲಿ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲ್ಲೂಕು ಪಂಚಾಯತಿ, ಪಟ್ಟಣ ಪಂಚಾಯಿತಿ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ ಪಾಕ್ಷಿಕ ಕಾರ್ಯಕ್ರಮದ ಉದ್ಘಾಟನೆ ಮಾಡಿ ಅವರು ಮಾತನಾಡಿದರು.
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮದಿನದ ಅಂಗವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಹಮ್ಮಿಕೊಂಡಿರುವ 15 ದಿನಗಳ ಸ್ವಚ್ಛತಾ ಹೀ ಸೇವಾ ಪಾಕ್ಷಿಕ ಕಾರ್ಯಕ್ರಮವು ಸಾರ್ವಜನಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಪ್ರತಿಯೊಬ್ಬರು ಈ 15 ದಿನಗಳಿಗೆ ಸೀಮಿತವಾಗದೆ ಪ್ರತಿದಿನವೂ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಿ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಅಚ್ಚುಕಟ್ಟಾಗಿ ಇಟ್ಟುಕೊಳ್ಳಬೇಕು. ಪಟ್ಟಣದ ಸ್ವಚ್ಛತಾ ಕಾರ್ಯದಲ್ಲಿ ಪೌರ ಕಾರ್ಮಿಕರ ಸೇವೆ ಅಪಾರ, ಅವರ ಶ್ರಮದಿಂದ ಸ್ವಚ್ಛತೆಯನ್ನು ಕಾಣಬಹುದು, ಇತ್ತೀಚಿನ ದಿನಗಳಲ್ಲಿ ಪೌರಕಾರ್ಮಿಕ ಸಮಾಜದ ಮಕ್ಕಳು ಸಹ ಉನ್ನತ ವ್ಯಾಸಂಗ ಮಾಡಿ ಬೇರೆ ಕೆಲಸಗಳಿಗೆ ಹೋಗುತ್ತಿರುವುದರಿಂದ ಸ್ವಚ್ಛತಾ ಕೆಲಸಕ್ಕೆ ಬರುವವರು ತುಂಬಾ ಕಡಿಮೆಯಾಗಿದ್ದಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಅವರೊಟ್ಟಿಗೆ ನಾವು ಕೈಜೋಡಿಸಿದಾಗ ಮಾತ್ರ ಗಾಂಧಿಜಿಯವರ ಸ್ವಚ್ಛ ಭಾರತದ ಕನಸನ್ನು ನನಸು ಮಾಡಬಹುದು ಎಂದು ತಿಳಿಸಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ತಮ್ಮ ಬಾಲ್ಯದ ಜೀವನದಲ್ಲಿಯೇ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ಕೊಡುವ ಸೇವಾ ಮನೋಭಾವವನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ವಾತಾವರಣ ನಿರ್ಮಿಸಿ ಉತ್ತಮ ಅರೋಗ್ಯ ಸಂಪಾದಿಸಿಕೊಳ್ಳೋಣ. ಕ್ಷೇತ್ರ ಶಿಕ್ಷಣಾಧಿಕಾರಿಗಳು ಹನೂರು ಶೈಕ್ಷಣಿಕ ವಲಯದ ಎಲ್ಲಾ ಶಾಲೆಗಳಲ್ಲೂ ಸ್ವಚ್ಛತೆಯ ಬಗ್ಗೆ ಮಕ್ಕಳಿಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸುವ ಮೂಲಕ ಜಾಗೃತಿ ಮೂಡಿಸಿ ಎಂದು ತಿಳಿಸಿದರು.
ತಾಲೂಕು ಪಂಚಾಯಿತಿ ಇ ಒ ಉಮೇಶ್ ಮಾತನಾಡಿ ಸ್ವಚ್ಛತಾ ಹಿ ಸೇವಾ ಪಕ್ಷಿಕ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವುದು, ಯುವಕರ ಜಾಥಾ ,ಗಿಡ ನೆಡುವುದು, ಗ್ರಾಮೀಣ ಕ್ರೀಡಾಕೂಟ, ಶೌಚಾಲಯ ಬಳಕೆ ಜಾಗೃತಿ, ತ್ಯಾಜ್ಯ ಮರುಬಳಕೆ, ಬೀದಿಬದಿಯ ಸ್ವಚ್ಛತೆ ಅಭಿಯಾನ ಸೇರಿದಂತೆ ಮುಂತಾದ ಕಾರ್ಯಕ್ರಮಗಳನ್ನು ರೂಪಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಉದ್ದೇಶವಾಗಿದೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ಹರೀಶ್ ಮಾತನಾಡಿ ಹನೂರು ಪಟ್ಟಣ ಪಂಚಾಯಿತಿಯಲ್ಲಿ ಪೌರಕಾರ್ಮಿಕರ ಕೊರತೆ ಇರುವುದರಿಂದ ಸಮರ್ಪಕವಾಗಿ ಕಸ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ ಈ ನಿಟ್ಟಿನಲ್ಲಿ ಪಟ್ಟಣದ ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡುವ ಮೂಲಕ ಅವರಿಗೆ ಸಹಕಾರ ನೀಡಬೇಕು ಮುಂದಿನ ದಿನಗಳಲ್ಲಿ ಹೆಚ್ಚು ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸುಂದರ ಪಟ್ಟಣ ವನ್ನಾಗಿ ಮಾಡಲು ಶ್ರಮಿಸುತ್ತೇವೆ ಎಂದರು.
ಕಾರ್ಯಕ್ರಮದ ಬಳಿಕ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಗಿಡ ನೆಟ್ಟು ನೀರಿರೆದು ಆವರಣ ಸ್ವಚ್ಛಗೊಳಿಸಿದರು.
ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಮುಮ್ತಾಜ್ ಭಾನು, ಉಪಾಧ್ಯಕ್ಷ ಆನಂದ್ , ಸದಸ್ಯರಾದ ಹರೀಶ್ ಗಿರೀಶ್ ಸುದೇಶ್ ,ಸೋಮಶೇಖರ್, ಸಂಪತ್, ಮಹೇಶ್ ನಾಯಕ, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಮುಖ್ಯಾಧಿಕಾರಿ ಅಶೋಕ್ ಆರ್, ಎ.ಡಿ ರವೀಂದ್ರ, ದೈಹಿಕ ಶಿಕ್ಷಣ ಸಂಯೋಜಕ ಮಹಾದೇವ, ಶಿಕ್ಷಣ ಇಲಾಖೆಯ ಕಿರಣ್ ಸೇರಿದಂತೆ ಇನ್ನಿತರರು ಹಾಜರಿದ್ದರು.
ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…
ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…
ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…
ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…