Mysore
25
broken clouds

Social Media

ಗುರುವಾರ, 23 ಏಪ್ರಿಲ 2026
Light
Dark

ಆ್ಯಸಿಡ್ ಕುಡಿದು ವ್ಯಕ್ತಿ ಸಾವು

ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ (ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.

ಆಸಿಡ್ ಸೇವಿಸಿದ ಬಳಿಕ ಬಿದ್ದು ಒದ್ದಾಡುತ್ತಿದ್ದ ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು.

ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!