ಚಾಮರಾಜನಗರ : ಕುಡಿದ ಮತ್ತಿನಲ್ಲಿ ನೀರು ಎಂದು ಆ್ಯಸಿಡ್ ಕುಡಿದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಸಿದ್ದರಾಜು (35) ಮೃತ ದುರ್ದೈವಿ. ಭಾನುವಾರ (ಜುಲೈ 23) ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕುಡಿದ ಮತ್ತಿನಲ್ಲಿ ನೀರು ಎಂದು ಭಾವಿಸಿ ಸಿದ್ದರಾಜು ಮನೆಯಲ್ಲಿಟ್ಟಿದ್ದ ಶೌಚಾಲಯ ಸ್ವಚ್ಛಗೊಳಿಸುವ ಆಸಿಡ್ ಸೇವಿಸಿ ಅಸ್ವಸ್ಥಗೊಂಡಿದ್ದ.
ಆಸಿಡ್ ಸೇವಿಸಿದ ಬಳಿಕ ಬಿದ್ದು ಒದ್ದಾಡುತ್ತಿದ್ದ ಸಿದ್ದರಾಜುನನ್ನು ಚಿಕಿತ್ಸೆಗಾಗಿ ಗ್ರಾಮಸ್ಥರು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದರು. ನಗರದ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆ.ಆರ್.ಆಸ್ಪತ್ರೆಗೆ ರವಾನಿಸಲಾಗಿತ್ತು.
ಆದರೆ ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಸಿದ್ದರಾಜು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತಾ ಅರಣ್ಯ ಪ್ರದೇಶದ ಓಂಕಾರ್ ವ್ಯಾಪ್ತಿಯಲ್ಲಿ ಒಂಟಿ ಸಲಗದ ದಾಂಧಲೆ ಮಿತಿಮೀರಿದ್ದು. ರೈತರ ಅಪಾರ ಪ್ರಮಾಣದ…
ಗುಂಡ್ಲುಪೇಟೆ: ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದಲ್ಲಿ ಸಫಾರಿಗೆ ತೆರಳಿದ್ದವರಿಗೆ ವ್ಯಾಘ್ರ ದರ್ಶನದ ಜೊತೆಗೆ ಜಿಂಕೆಯನ್ನು ಬೇಟೆಯಾಡಿದ ಸೀಳುನಾಯಿ ದರ್ಶನವಾಗಿದ್ದು, ಅಪರೂಪದ…
ರಾಜ್ಯದ ಅರಣ್ಯ ಪ್ರದೇಶ ಒಂದು ವಾರದ ಅಂತರದಲ್ಲಿ ಕೇರಳ ರಾಜ್ಯದ ಇಬ್ಬರು ಹೆಣ್ಣುಮಕ್ಕಳ ಪೈಕಿ ಒಬ್ಬಾಕೆಯ ಪ್ರಾಣವನ್ನೇ ಬಲಿತೆಗೆದುಕೊಂಡರೆ, ಇನ್ನೊಬ್ಬಾಕೆಯ…
ಶಾಸನ ಸಭೆಗಳಲ್ಲಿ ಮಹಿಳೆಯರಿಗೆ ಶೇ.೩೩ರಷ್ಟು ಮೀಸಲಾತಿ ಕಲ್ಪಿಸುವ ಕುರಿತು ನಿರ್ಧಾರ ಏಪ್ರಿಲ್ ೧೬ರಿಂದ ೧೮ರವರೆಗೆ ಮೂರು ದಿನಗಳ ಕಾಲ ಸಂಸತ್ತಿನ…
ಅಭ್ಯರ್ಥಿಗಳ ಗೆಲುವಿಗಾಗಿ ಸ್ವತಃ ಫೀಲ್ಡಿಗಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆ ಆಡಳಿತಾರೂಢ ಕಾಂಗ್ರೆಸ್ ಮತ್ತು…
ನವೀನ್ ಡಿಸೋಜ ಕೊಡಗು ಜಿಲ್ಲೆಯಲ್ಲಿ ಇವೆ ಅಪಾಯಕಾರಿ ಸ್ಥಳಗಳು; ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸಲಹೆ ಮಡಿಕೇರಿ:ಬೇಸಿಗೆಯಲ್ಲಿ ಬಿಸಿಲ ಝಳಕ್ಕೆ ನೀರಿಗಿಳಿದು…