ಚಾಮರಾಜನಗರ

ಶ್ವಾನ ಉಳಿಸಲು ಹೋಗಿ ವ್ಯಕ್ತಿ ಸಾವು

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿಹುಂಡಿ ಹೊಸ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಜಾಲಹಳ್ಳಿ ಹುಂಡಿ ಚಂದ್ರುಗೌಡ (38) ಮೃತಪಟ್ಟವರು. ಮನೆ ಮುಂಭಾಗದ ಖಾಲಿ ನಿವೇಶನಕ್ಕೆ ಹಾಕಿರುವ ತಂತಿ ಬೇಲಿಗೆ ಸಿಲುಕಿ ಶ್ವಾನ ಸತ್ತ ಸ್ಥಿತಿಯಲ್ಲಿ ಬಿದ್ದಿತ್ತು. ಬೆಳಗಿನ ಜಾವ ಆಗ ತಾನೇ ಮನೆಯಿಂದ ಆಚೆ ಬಂದ ಚಂದ್ರುಗೌಡ ಅವರು ಶ್ವಾನ ಬಿದ್ದಿದ್ದ ಸ್ಥಿತಿಯನ್ನು ನೋಡಿ ದಿಗಿಲುಗೊಂಡು ಅದನ್ನು ದಿಢೀರನೆ ಉಪಚರಿಸಲು ಹೋದಾಗ ಶ್ವಾನಕ್ಕೆ ತಗುಲಿದ್ದ ವಿದ್ಯುತ್ ಇವರಿಗೂ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:-  ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

ಘಟನಾ ಸ್ಥಳದಲ್ಲಿ ಕಬ್ಬಿಣದ ವಿದ್ಯುತ್ ಕಂಬವಿದೆ. ಜೊತೆಗೆ, ಈ ತಂತಿ ಬೇಲಿಗೆ ತಾಗಿಕೊಂಡಂತೆ ಸುಮಾರು ಒಂದು ಕಿ.ಮೀ. ಉದ್ದದವರೆಗೂ ಸಂಬಂಧಿಸಿದವರು ಅವರವರ ಜಾಗಕ್ಕೆ ತಂತಿಬೇಲಿ ಹಾಕಿಕೊಂಡಿದ್ದಾರೆ. ಹಾಗಾಗಿ ಯಾವ ಕಡೆಯಿಂದ ತಂತಿ ಬೇಲಿಗೆ ವಿದ್ಯುತ್ ಪ್ರವಹಿಸಿದೆ ಎಂಬುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಕಬ್ಬಿಣದ ವಿದ್ಯುತ್ ಕಂಬ ಇರುವುದರಿಂದ ಯಾವುದಾದರೂ ತಂತಿ ಕಳಚಿ ಅದಕ್ಕೆ ಟಚ್ ಆಗಿ ಘಟನೆ ನಡೆದಿರಬಹುದು ಎಂದೂ ಹೇಳಲಾಗುತ್ತಿದೆ.

ಸ್ಥಳಕ್ಕೆ ವಿದ್ಯುತ್ ಪರಿವೀಕ್ಷಕರಾದ ಸ್ವಪ್ನಾ , ಸೆಸ್ಕ್ ಎಇಇ ಮಹೇಶ್, ಎಇ ಪ್ರವೀಣ್, ಜೆಇ ಮಂಜುನಾಥ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು. ಮೃತರ ಕುಟುಂಬ ವರ್ಗದವರಿಗೆ ಇಲಾಖೆಯಿಂದ ನಿಯಮಾನುಸಾರ 5 ಲಕ್ಷ ರೂ. ಪರಿಹಾರ ನೀಡಲು ಅವಕಾಶವಿದೆ. ಮಾನವೀಯ ದೃಷ್ಟಿಯಿಂದ ತಾತ್ಕಾಲಿಕವಾಗಿಯೂ ಬುಧವಾರ ಪರಿಹಾರ ಧನ ನೀಡಲಾಗಿದೆ ಎಂದು ಸೆಸ್ಕ್ ಅಧಿಕಾರಿಯೊಬ್ಬರು ತಿಳಿಸಿದರು. ಈ ಮಧ್ಯೆ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಓದಿನ ವಿಸ್ತಾರ:- ಪಂಜು ಗಂಗೊಳ್ಳಿ ಅವರ ಅಂಕಣಗಳನ್ನು ಓದಲು ಈ ಲಿಂಕ್‌ ಬಳಸಿ

ಆಂದೋಲನ ಡೆಸ್ಕ್

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago