ಚಾಮರಾಜನಗರ

ಶ್ವಾನ ಉಳಿಸಲು ಹೋಗಿ ವ್ಯಕ್ತಿ ಸಾವು

ಚಾಮರಾಜನಗರ: ವಿದ್ಯುತ್ ಆಘಾತಕ್ಕೆ ಒಳಗಾಗಿದೆ ಎಂಬುದು ತಿಳಿಯದೇ ತನ್ನ ಶ್ವಾನವನ್ನು ಏಕಾಏಕಿ ಉಪಚರಿಸಲು ಹೋಗಿ ಶ್ವಾನದ ಜೊತೆ ಅದರ ಒಡೆಯನೂ ವಿದ್ಯುತ್ ಪ್ರವಹಿಸಿ ಮೃತಪಟ್ಟಿರುವ ಘಟನೆ ನಗರದ ಜಾಲಹಳ್ಳಿಹುಂಡಿ ಹೊಸ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಜಾಲಹಳ್ಳಿ ಹುಂಡಿ ಚಂದ್ರುಗೌಡ (38) ಮೃತಪಟ್ಟವರು. ಮನೆ ಮುಂಭಾಗದ ಖಾಲಿ ನಿವೇಶನಕ್ಕೆ ಹಾಕಿರುವ ತಂತಿ ಬೇಲಿಗೆ ಸಿಲುಕಿ ಶ್ವಾನ ಸತ್ತ ಸ್ಥಿತಿಯಲ್ಲಿ ಬಿದ್ದಿತ್ತು. ಬೆಳಗಿನ ಜಾವ ಆಗ ತಾನೇ ಮನೆಯಿಂದ ಆಚೆ ಬಂದ ಚಂದ್ರುಗೌಡ ಅವರು ಶ್ವಾನ ಬಿದ್ದಿದ್ದ ಸ್ಥಿತಿಯನ್ನು ನೋಡಿ ದಿಗಿಲುಗೊಂಡು ಅದನ್ನು ದಿಢೀರನೆ ಉಪಚರಿಸಲು ಹೋದಾಗ ಶ್ವಾನಕ್ಕೆ ತಗುಲಿದ್ದ ವಿದ್ಯುತ್ ಇವರಿಗೂ ಪ್ರವಹಿಸಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ:-  ಮನೆ ಮೇಲೆ ಉರುಳಿದ ಮರ, ವಿದ್ಯುತ್‌ ಕಂಬ: ತಪ್ಪಿದ ಭಾರೀ ಅನಾಹುತ

ಘಟನಾ ಸ್ಥಳದಲ್ಲಿ ಕಬ್ಬಿಣದ ವಿದ್ಯುತ್ ಕಂಬವಿದೆ. ಜೊತೆಗೆ, ಈ ತಂತಿ ಬೇಲಿಗೆ ತಾಗಿಕೊಂಡಂತೆ ಸುಮಾರು ಒಂದು ಕಿ.ಮೀ. ಉದ್ದದವರೆಗೂ ಸಂಬಂಧಿಸಿದವರು ಅವರವರ ಜಾಗಕ್ಕೆ ತಂತಿಬೇಲಿ ಹಾಕಿಕೊಂಡಿದ್ದಾರೆ. ಹಾಗಾಗಿ ಯಾವ ಕಡೆಯಿಂದ ತಂತಿ ಬೇಲಿಗೆ ವಿದ್ಯುತ್ ಪ್ರವಹಿಸಿದೆ ಎಂಬುದರ ಕುರಿತು ಪರಿಶೀಲನೆ ಮಾಡಲಾಗುತ್ತಿದೆ. ಕಬ್ಬಿಣದ ವಿದ್ಯುತ್ ಕಂಬ ಇರುವುದರಿಂದ ಯಾವುದಾದರೂ ತಂತಿ ಕಳಚಿ ಅದಕ್ಕೆ ಟಚ್ ಆಗಿ ಘಟನೆ ನಡೆದಿರಬಹುದು ಎಂದೂ ಹೇಳಲಾಗುತ್ತಿದೆ.

ಸ್ಥಳಕ್ಕೆ ವಿದ್ಯುತ್ ಪರಿವೀಕ್ಷಕರಾದ ಸ್ವಪ್ನಾ , ಸೆಸ್ಕ್ ಎಇಇ ಮಹೇಶ್, ಎಇ ಪ್ರವೀಣ್, ಜೆಇ ಮಂಜುನಾಥ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದರು. ಮೃತರ ಕುಟುಂಬ ವರ್ಗದವರಿಗೆ ಇಲಾಖೆಯಿಂದ ನಿಯಮಾನುಸಾರ 5 ಲಕ್ಷ ರೂ. ಪರಿಹಾರ ನೀಡಲು ಅವಕಾಶವಿದೆ. ಮಾನವೀಯ ದೃಷ್ಟಿಯಿಂದ ತಾತ್ಕಾಲಿಕವಾಗಿಯೂ ಬುಧವಾರ ಪರಿಹಾರ ಧನ ನೀಡಲಾಗಿದೆ ಎಂದು ಸೆಸ್ಕ್ ಅಧಿಕಾರಿಯೊಬ್ಬರು ತಿಳಿಸಿದರು. ಈ ಮಧ್ಯೆ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದರು.

ಓದಿನ ವಿಸ್ತಾರ:- ಪಂಜು ಗಂಗೊಳ್ಳಿ ಅವರ ಅಂಕಣಗಳನ್ನು ಓದಲು ಈ ಲಿಂಕ್‌ ಬಳಸಿ

ಆಂದೋಲನ ಡೆಸ್ಕ್

Recent Posts

ಅನಗತ್ಯ ಸಿಜೇರಿಯನ್‌ ಹೆರಿಗೆ : ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಖಚಿತ

ಬೆಳಗಾವಿ : ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಜೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ನಿಯಮದಂತೆ ಕ್ರಮ…

10 mins ago

ಚಿಕ್ಕಮಗಳೂರಲ್ಲಿ ಮತ್ತೊಮ್ಮೆ ಹೆಲಿ ಟೂರಿಸಂಗೆ ನಿರ್ಧಾರ : ಪರಿಸರ ಸಂಘಟನೆಗಳಿಂದ ತೀವ್ರ ವಿರೋಧ

ಚಿಕ್ಕಮಗಳೂರು : ಅತ್ಯಂತ ಪರಿಸರ ಸೂಕ್ಷ ಸ್ಥಳಗಳನ್ನು ಹೊಂದಿರುವ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರಿಸರದ ಮೇಲೆ ಆಗುವ ದುಷ್ಪರಿಣಾಮಗಳನ್ನು ಗಣನೆಗೆ ತೆಗೆದುಕೊಳ್ಳದೆ…

19 mins ago

ಇತಿಹಾಸ ತಿರುಚಲು ಮೋದಿ ಯತ್ನ : ಗೌರವ್‌ ಗೊಗೊಯ್‌ ಆರೋಪ

ಹೊಸದಿಲ್ಲಿ : ಲೋಕಸಭೆಯಲ್ಲಿ ವಂದೇ ಮಾತರಂ ಗೀತೆ ಕುರಿತ ಚರ್ಚೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವು ಇತಿಹಾಸವನ್ನು…

25 mins ago

ಒಂದೇ ಒಂದು ಮಗುವಿದ್ದರೂ ಕೂಡ ಕನ್ನಡ ಶಾಲೆ ಮುಚ್ಚಲ್ಲ : ಸರ್ಕಾರ ಸ್ಪಷ್ಟನೆ

ಬೆಳಗಾವಿ : ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಮಗುವಿದ್ದರೂ ಕೂಡ ಯಾವುದೇ ಕಾರಣಕ್ಕೂ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚುವುದಿಲ್ಲ…

30 mins ago

ಸಿದ್ದರಾಮಯ್ಯ ಪೂರ್ಣವಧಿ ಸಿಎಂ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆ ಪರ ಯಂತ್ರೀಂದ್ರ ಬ್ಯಾಟಿಂಗ್‌

ಬೆಳಗಾವಿ : ಡಿನ್ನರ್‌ ಬ್ರೇಕ್‌ಫಾಸ್ಟ್‌ ಬಳಿಕವೂ ತಂದೆಯ ಪರ ಪುತ್ರ ಯತೀಂದ್ರ ಬ್ಯಾಟಿಂಗ್‌ ಮಾಡುವುದನ್ನು ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಪೂರ್ಣ ಅವಧಿಯವರೆಗೆ…

52 mins ago

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ : ಡಿಕೆಶಿ ಆಪ್ತ ಇನಾಯತ್‌ ಅಲಿಗೆ ದಿಲ್ಲಿ ಪೊಲೀಸರಿಂದ ನೋಟಿಸ್‌

ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…

1 hour ago