ಚಾಮರಾಜನಗರ

ಹನೂರು ಕ್ರೀಡಾಂಗಣ ಅಭಿವೃದ್ಧಿಗೆ ಕ್ರಮ: ಶಾಸಕ ಮಂಜುನಾಥ್‌

ಹನೂರು: ಪ್ರತಿಯೊಬ್ಬ ವಿದ್ಯಾರ್ಥಿಯೂ ಪಠ್ಯೇತರ ಚಟುವಟಿಕೆಗಳ ಜೊತೆಗೆ ಕ್ರೀಡೆಯಲ್ಲಿಯೂ ಭಾಗವಹಿಸುವ ಮೂಲಕ ಮಾನಸಿಕವಾಗಿ, ದೈಹಿಕವಾಗಿ ಸದೃಢರಾಗುವಂತೆ ಶಾಸಕ ಎಂ.ಆರ್ ಮಂಜುನಾಥ್ ತಿಳಿಸಿದರು.

ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಚಾಮರಾಜನಗರ ಜಿಲ್ಲೆ, ವಿವೇಕಾನಂದ ಸಂಯುಕ್ತ ಪದವಿ ಪೂರ್ವ ಕಾಲೇಜು ಹನೂರು ಹಾಗೂ ಜೆ.ಎಸ್. ಎಸ್. ಪದವಿ ಪೂರ್ವ ಕಾಲೇಜು ರಾಮಾಪುರ ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕ್ರೀಡಾ ಸಾಧನೆಗೆ ಮಕ್ಕಳಲ್ಲಿ ಶಿಸ್ತು, ಪರಿಶ್ರಮ ಮುಖ್ಯ, ಕ್ರೀಡೆಯಲ್ಲಿ ಆಸಕ್ತಿ ಇರುವ ಮಕ್ಕಳಲ್ಲಿ ಇನ್ನಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಇಂತಹ ಕ್ರೀಡಾಕೂಟಗಳನ್ನು ಆಯೋಜನೆ ಮಾಡಲಾಗುತ್ತಿದೆ. ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಮೂಲಕ ಜಿಲ್ಲೆ ಮತ್ತು ತಾಲ್ಲೂಕಿಗೆ ಕೀರ್ತಿ ತರಬೇಕು.

ಹನೂರು ಪಟ್ಟಣದ ಕ್ರೀಡಾಂಗಣಕ್ಕೆ ಇನ್ನಷ್ಟು ಸೌಲಭ್ಯಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಗೊಳಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು. ಇದರಿಂದ ಹನೂರು ತಾಲ್ಲೂಕಿನಲ್ಲಿ ಇನ್ನಷ್ಟು ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ಅವಕಾಶ ಆಗಲಿದೆ ಎಂದು ತಿಳಿಸಿದರು.

ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಪ್ರಸನ್ನ ಮಾತನಾಡಿ ಕ್ರೀಡಾಪಟುಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಲು ಪೂರಕವಾಗಿ ತೀರ್ಪುಗಾರರು ಸಮಚಿತ್ತದಿಂದ ತೀರ್ಪು ನೀಡುವ ಮೂಲಕ ಕ್ರೀಡಾ ಸ್ಪೂರ್ತಿ ಮೆರೆಯಬೇಕು. ಶಾಸಕರ ಸಲಹೆಯಂತೆ ಕ್ರೀಡಾಂಗಣದ ಅಭಿವೃದ್ಧಿಗಾಗಿ ಜಿಲ್ಲಾ ಕ್ರೀಡಾ ಅಧಿಕಾರಿಗಳ ಜೊತೆ ಚರ್ಚಿಸಿ ಅಭಿವೃದ್ದಿ ನೀಲನಕ್ಷೆ ತಯಾರಿಸುವಂತೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷರಾದ ಮುಮ್ತಾಜ್ ಬಾನು, ಉಪಾಧ್ಯಕ್ಷರಾದ ಆನಂದ್ ಕುಮಾರ್, ಪಟ್ಟಣ ಪಂಚಾಯತಿ ಸದಸ್ಯರಾದ ಪವಿತ್ರ, ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಗುರುಲಿಂಗಯ್ಯ, ಪದವಿ ಪೂರ್ವ ಶಿಕ್ಷಕರ ಸಂಘದ ಅಧ್ಯಕ್ಷ ನರೇಂದ್ರನಾಥ್, ಪ್ರಾಂಶುಪಾಲರಾದ ಮಧುಸೂದನ್, ವಿವೇಕಾನಂದ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಸುರೇಶ್ ನಾಯ್ಡು, ಸಂಚಾಲಕ ರಾಜೇಂದ್ರ ನಾಯ್ಡು ವಿವಿಧ ಕಾಲೇಜುಗಳ ಪ್ರಾಂಶುಪಾಲರು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

31 mins ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

33 mins ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

35 mins ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

37 mins ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

45 mins ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

52 mins ago