ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ಪೊಲೀಸ್ ರನ್’ ಶೀರ್ಷಿಕೆಯಡಿ ಇಂದು ಬೆಳಗ್ಗೆ 5 ಕಿ.ಮೀ ಮ್ಯಾರಥಾನ್ ನಡೆಯಿತು.
ಮ್ಯಾರಥಾನ್ ಪೊಲೀಸ್ ಕವಾಯತು ಮೈದಾನದಿಂದ ಪ್ರಾರಂಭವಾಗಿ ರಾಮಸಮುದ್ರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ತಲುಪಿ ಅಲ್ಲಿಂದ ಯೂಟರ್ನ್ ಪಡೆದು ಭುವನೇಶ್ವರಿ ವೃತ್ತ ತಲುಪಿ ವಾಪಸ್ ಪೊಲೀಸ್ ಕವಾಯತು ಮೈದಾನದಲ್ಲಿ ಅಂತ್ಯವಾಯಿತು. ಮ್ಯಾರಥಾನ್ನಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಡಾ.ಬಿ.ಟಿ.ಕವಿತಾ, ಜಿಲ್ಲಾ ಪಂಚಾಯಿತಿ ಸಿಇಓ ಮೋನಾ ರೋತ್ ಇದ್ದರು.
ಮ್ಯಾರಥಾನ್ನಲ್ಲಿ ಮೊದಲು ಬಂದ 50 ಮಂದಿಗೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಪದಕಗಳನ್ನು ಪ್ರದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಮನಸ್ಸು ಮತ್ತು ಶರೀರ ಆರೋಗ್ಯವಾಗಿದ್ದರೆ ಮಾತ್ರ ಉತ್ತಮವಾಗಿ ಕರ್ತವ್ಯ ನಿರ್ವಹಣೆ ಮಾಡಲು ಸಾಧ್ಯ. 8 ವರ್ಷ ವಯಸ್ಸಿನಿಂದ 80ರ ವಯಸ್ಸಿನ ತನಕವೂ ಫಿಟ್ ನೆಸ್ ಮತ್ತು ಉತ್ತಮ ಆರೋಗ್ಯ ಇರುವುದು ಅವಶ್ಯಕವಾಗಿದೆ. ಮನೆಯ ಜವಾಬ್ದಾರಿ, ಉದ್ಯೋಗದ ಒತ್ತಡದ ನಡುವೆ ಆರೋಗ್ಯ ಕಾಪಾಡಿಕೊಳ್ಳುವುದು ಮುಖ್ಯ ಎಂದು ಆರೋಗ್ಯದ ಬಗ್ಗೆ ಸಲಹೆ ನೀಡಿದರು.
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…
ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…