ಚಾಮರಾಜನಗರ

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಆದರೆ ಮುಂಭಾಗದಲ್ಲಿ ಮೇಯುತಿದ್ದ ಮೇಕೆ ಚಿರತೆ ದಾಳಿಯಿಂದ ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜರುಗಿದೆ.

ಹನೂರು ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಕ್ಕೆಹೊಲ ಗ್ರಾಮದ ಪ್ರಸನ್ನ ಎಂಬವರು ತಾವು ಸಾಕುತ್ತಿರುವ ಕುರಿಗಳನ್ನು ಗ್ರಾಮದ ಸಮೀಪದ ಸೋದರ ಮಾವನ ಜಮೀನಿನಲ್ಲಿ ಮೇಯಿಸುವಾಗ ಏಕಾಏಕಿ ಚಿರತೆ ದಾಳಿ ನಡೆಸಿದೆ. ಅದೃಷ್ಟ ವಶಾತ್ ಚಿರತೆ ದಾಳಿಯಿಂದ ಪ್ರಸನ್ನ ಪಾರಾಗಿದ್ದಾರೆ. ಅವರ ಕಿರುಚಾಟದಿಂದ ಚಿರತೆ ಗಾಬರಿಗೊಂಡು ಸಮೀಪದಲ್ಲಿಯೇ ಮೇಯುತ್ತಿದ್ದ ಕುರಿಯನ್ನು ಹೊತ್ತೋಯ್ದಿದೆ. ನಂತರ ದಾಳಿಯಿಂದ ಗಾಯಗೊಂಡಿದ್ದ ಮೇಕೆ ಸ್ಥಳದಲ್ಲಿಯೇ ಮೃತಪಟ್ಟಿದೆ.

ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸೂಕ್ತ ಪರಿಹಾರಕ್ಕೆ ಆಗ್ರಹ
ಕಳೆದ ಹಲವಾರು ತಿಂಗಳಿನಿಂದ ಹೊನ್ನಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಾಡು ಪ್ರಾಣಿಗಳ ಹಾವಳಿ ನಿರಂತರವಾಗಿ ಹೆಚ್ಚಾಗಿದೆ. ಕಾಡುಪ್ರಾಣಿಗಳ ಹಾವಳಿ ನಿಯಂತ್ರಣ ಮಾಡುವಂತೆ ಮನವಿ ಮಾಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕಾಡುಪ್ರಾಣಿಗಳ ಹಾವಳಿಯಿಂದ ರೈತರ ಜಮೀನಿನಲ್ಲಿ ಬೆಳೆದ ಫಸಲು ನಾಶವಾಗಿದೆ. ಸಾಕು ಪ್ರಾಣಿಗಳೆಲ್ಲ ಕಾಡು ಪ್ರಾಣಿಗಳ ಪಾಲಾಗುತ್ತಿದೆ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ಕಾಡುಪ್ರಾಣಿಗಳ ದಾಳಿಯಿಂದ ಮೃತಪಟ್ಟಿರುವ ಕುರಿಗೆ ಸೂಕ್ತ ಪರಿಹಾರ ನೀಡುವಂತೆ ನೊಂದ ರೈತ ಪ್ರಸನ್ನ ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago