ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ ಅವಕಾಶ ಮಾಡಿಕೊಡುತ್ತಿದ್ದು, ಚಿಕಿತ್ಸೆ ವೆಚ್ಚಕ್ಕಾಗಿ ದಾನಿಗಳ ಮೊರೆ ಹೋಗಿದ್ದಾರೆ. ದಾನಿಗಳು ತಮ್ಮ ಕೈಲಾದ ಸಹಾಯ ಮಾಡುವಂತೆ ತಾಯಿ ಕಮಲಾಕ್ಷಿ ಮನವಿ ಮಾಡಿದ್ದಾರೆ.
ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ವಾಸವಿರುವ ಕಮಲಾಕ್ಷಿ ಮತ್ತು ನಾಗರಾಜು ಎಂಬ ದಂಪತಿಗೆ ಇರುವ ಏಕೈಕ ಮಗ ಮುತ್ತುಕುಮಾರ್ (35) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜೀವನ ದುಸ್ತರವಾಗಿದೆ.
ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗನ ಜೀವ ಉಳಿಸಲು ಪಣತೊಟ್ಟಿರುವ ತಾಯಿ ತನ್ನ ಕಿಡ್ಡಿಯನ್ನ ಮಗನಿಗೆ ಜೋಡಣೆ ಮಾಡಲು ಈಗಾಗಲೇ ಎಲ್ಲಾ ರೀತಿಯ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದು, ಅನುಮತಿ ಸಿಕ್ಕ ಕೂಡಲೇ ಕಿಡ್ನಿ ಜೋಡಣೆ ನಡೆಯಲಿದೆ. ಇದಕ್ಕಾಗಿ ಚಿಕಿತ್ಸಾ ವ್ಯಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೇಲ್ಪಟ್ಟು ಬೇಕಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ. ಹಾಗಾಗಿ ಸಹೃದಯವಂತ ದಾನಿಗಳು ಈ ಕೆಳಕಂಡ ಖಾತೆ ಸಂಖ್ಯೆಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಇದಲ್ಲದೆ ಮುತ್ತುಕುಮಾರ್ ಯುವಕನ ತಂದೆಯು ಸಹ ವಿಕಲ ಚೇತನರಾಗಿದ್ದು ಕುಟುಂಬ ನಿರ್ವಹಣೆ ಬಹಳ ಸಂಕಟದ ಪರಿಸ್ಥಿತಿಯಲ್ಲಿ ಸಿಲುಕಿದೆ. ಹಾಗಾಗಿ ದಾನಿಗಳು ಕಡು ಬಡವರಾದ ನಮಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.
ಖಾತೆ ಸಂಖ್ಯೆ ಮುತ್ತು ಕುಮಾರ್ ಎನ್
A/NO-43880103242
IFSI- SBIN0040078
ಅಥವಾ 9632693564 ಈ ಸಂಖ್ಯೆಗೆ ಫೋನ್ ಪೇ ಮೂಲಕ ಸಹ ಸಹಾಯ ಮಾಡಬಹುದು ಎಂದು ತಿಳಿಸಿದ್ದಾರೆ.
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…
ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್ಗಳ ಪ್ರವೇಶ್ ಪರೀಕ್ಷೆಯನ್ನು ಜೂನ್.14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…
ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…