ಚಾಮರಾಜನಗರ

ಕಿಡ್ನಿ ಮರು ಜೋಡಣೆಗೆ ಸಹಾಯ ಹಸ್ತ ಕೋರಿದ ಬಡ ಕುಟುಂಬ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಸ್ವಂತ ಮಗನಿಗೆ ತಾಯಿ ಕಿಡ್ನಿ ಜೋಡಣೆಗೆ ಅವಕಾಶ ಮಾಡಿಕೊಡುತ್ತಿದ್ದು, ಚಿಕಿತ್ಸೆ ವೆಚ್ಚಕ್ಕಾಗಿ ದಾನಿಗಳ ಮೊರೆ ಹೋಗಿದ್ದಾರೆ. ದಾನಿಗಳು ತಮ್ಮ ಕೈಲಾದ ಸಹಾಯ ಮಾಡುವಂತೆ ತಾಯಿ ಕಮಲಾಕ್ಷಿ ಮನವಿ ಮಾಡಿದ್ದಾರೆ.

ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ವಾಸವಿರುವ ಕಮಲಾಕ್ಷಿ ಮತ್ತು ನಾಗರಾಜು ಎಂಬ ದಂಪತಿಗೆ ಇರುವ ಏಕೈಕ ಮಗ ಮುತ್ತುಕುಮಾರ್ (35) ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಜೀವನ ದುಸ್ತರವಾಗಿದೆ.

ಎರಡು ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗನ ಜೀವ ಉಳಿಸಲು ಪಣತೊಟ್ಟಿರುವ ತಾಯಿ ತನ್ನ ಕಿಡ್ಡಿಯನ್ನ ಮಗನಿಗೆ ಜೋಡಣೆ ಮಾಡಲು ಈಗಾಗಲೇ ಎಲ್ಲಾ ರೀತಿಯ ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದು, ಅನುಮತಿ ಸಿಕ್ಕ ಕೂಡಲೇ ಕಿಡ್ನಿ ಜೋಡಣೆ ನಡೆಯಲಿದೆ. ಇದಕ್ಕಾಗಿ ಚಿಕಿತ್ಸಾ ವ್ಯಚ್ಚ ಸುಮಾರು ಹತ್ತು ಲಕ್ಷಕ್ಕೂ ಹೆಚ್ಚು ಮೇಲ್ಪಟ್ಟು ಬೇಕಾಗುತ್ತದೆ ಎಂದು ವೈದ್ಯರು ತಿಳಿಸುತ್ತಾರೆ. ಹಾಗಾಗಿ ಸಹೃದಯವಂತ ದಾನಿಗಳು ಈ ಕೆಳಕಂಡ ಖಾತೆ ಸಂಖ್ಯೆಗೆ ತಮ್ಮ ಕೈಲಾದಷ್ಟು ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಇದಲ್ಲದೆ ಮುತ್ತುಕುಮಾರ್ ಯುವಕನ ತಂದೆಯು ಸಹ ವಿಕಲ ಚೇತನರಾಗಿದ್ದು ಕುಟುಂಬ ನಿರ್ವಹಣೆ ಬಹಳ ಸಂಕಟದ ಪರಿಸ್ಥಿತಿಯಲ್ಲಿ ಸಿಲುಕಿದೆ. ಹಾಗಾಗಿ ದಾನಿಗಳು ಕಡು ಬಡವರಾದ ನಮಗೆ ಸಹಾಯ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಖಾತೆ ಸಂಖ್ಯೆ ಮುತ್ತು ಕುಮಾರ್ ಎನ್
A/NO-43880103242
IFSI- SBIN0040078

ಅಥವಾ 9632693564 ಈ ಸಂಖ್ಯೆಗೆ ಫೋನ್ ಪೇ ಮೂಲಕ ಸಹ ಸಹಾಯ ಮಾಡಬಹುದು ಎಂದು ತಿಳಿಸಿದ್ದಾರೆ.

 

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago