ಚಾಮರಾಜನಗರ

ತಾಯಿ ಮಕ್ಕಳ ಅಸ್ಪತ್ರೆಗೆ ಬೇಬಿ ವಾರ್ಮರ್ ಕೊಡುಗೆ ನೀಡಿದ ರಾಜಮಾತೆ ಪ್ರಮೋದಾದೇವಿ ಒಡೆಯರ್‌

ಗುಂಡ್ಲುಪೇಟೆ: ಪಟ್ಟಣದ ತಾಯಿ ಮಕ್ಕಳ ಅಸ್ಪತ್ರೆಗೆ ಗುಣಾಂಭ ಟ್ರಸ್ಟ್ ವತಿಯಿಂದ ರಾಜಮಾತೆ ಪ್ರಮೋದಾದೇವಿ ಅವರು 20 ಮಕ್ಕಳ ವಾರ್ಮರ್ ಮತ್ತು ಮಾನಿಟರ್‌ಗಳನ್ನು ಕೊಡುಗೆಯಾಗಿ ನೀಡಿದರು.

ನಂತರ ಮಾತನಾಡಿದ ಅವರು, ತಾಯಿ ಮಕ್ಕಳ ಅನುಕೂಲಕ್ಕಾಗಿಯೇ ನಾವು ಇ ಟ್ರಸ್ಟ್ ಮೂಲಕ ಜನನವಾದ ಮಕ್ಕಳಿಗೆ ಹಾಗೂ ತಾಯಂದಿರಿಗೆ ಅನುಕೂಲವಾಗುವ ಉಪಕರಣಗಳನ್ನು ನೀಡುತ್ತಾ ಬರುತ್ತಿದ್ದೇವೆ. ಗುಂಡ್ಲುಪೇಟೆ ಹಾಗೂ ನಮ್ಮ‌ ಸಂಬಂಧ ಹಳೆಯದು. ಇಲ್ಲಿನ ಸರ್ಕಾರಿ ಅಸ್ಪತ್ರೆಗೆ ಅನುಕೂಲವಾಗಲಿ ಎಂದು ಇವುಗಳನ್ನು ನೀಡುತ್ತಿದ್ದೇವೆ ಇದನ್ನು ಸದ್ಬಳಕೆ ಮಾಡಿಕೊಳ್ಳಿ ಎಂದರು.

ಶಾಸಕ ಗಣೇಶ್ ಪ್ರಸಾದ್ ಮಾತನಾಗಿ, ರಾಜಮಾತೆಯವರು ನಮ್ಮ ತಾಲ್ಲೂಕನ್ನು ಗುರುತಿಸಿ ಮಕ್ಕಳಿಗೆ ಅನುಕೂಲವಾಗಲಿ ಎಂದು ವಾರ್ಮರ್ ಮಾನಿಟರ್ ನೀಡಿದ್ದಾರೆ. ಇತಿಹಾಸ ಓದಿದಾಗ ರಾಜರು ಒಂದು ಜಾಗಕ್ಕೆ ಸೀಮಿತವಾಗಿಲ್ಲ. ಹಾಗಾಗಿ ಇಂದಿಗೂ ಅವರ ಸೇವಾ ಕಾರ್ಯ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಅವರು ಸಹಕಾರ ನೀಡಲಿದ್ದಾರೆ. ಜೊತೆಗೆ ಮುಖ್ಯವಾಗಿ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಮಾಜಿ ಕಾಡಾ ಅಧ್ಯಕ್ಷ ಎಚ್ ಎಸ್ ನಂಜಪ್ಪ, ಪುರಸಭೆ ಅಧ್ಯಕ್ಷ ಮಧುಸೂದನ್, ತಾಲ್ಲೂಕು ಆರೋಗ್ಯಾಧಿಕಾರಿ ಅಲೀಂ ಪಾಷ, ಅಸ್ಪತ್ರೆ ಆಡಳಿತಾಧಿಕಾರಿ ಡಾ.ಮಂಜುನಾಥ್, ಪುರಸಭೆ ಸದಸ್ಯರು, ವೈದ್ಯರುಗಳು ಸೇರಿದಂತೆ ಹಲವಾರು ಸಾರ್ವಜನಿಕರು ಹಾಜರಿದ್ದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಬಸ್‌ ಸೌಲಭ್ಯ ಕಲ್ಪಿಸಲು ಡಿಪೋ ನಿರ್ಮಾಣ: ಶಾಸಕ ಎಂ.ಆರ್.‌ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್‌ಆರ್‌ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…

12 mins ago

ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್ ಸಾವು

‌ಶ್ರೀರಂಗಪಟ್ಟಣ: ವಿದ್ಯುತ್‌ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್‌ಮ್ಯಾನ್‌ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…

21 mins ago

ರಾಜ್ಯದ ಹಲವೆಡೆ ಭಾರೀ ಗಾಳಿ ಮಳೆ: ಜನಜೀವನ ಅಸ್ತವ್ಯಸ್ತ

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…

33 mins ago

ಹನೂರು: 153 ದಿನಗಳಿಂದ ರೈತರು ನಡೆಸುತ್ತಿದ್ದ ಅಹೋರಾತ್ರಿ ಧರಣಿ ಅಂತ್ಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…

54 mins ago

ಮೈಸೂರಿನಲ್ಲಿ ಅವೈಜ್ಞಾನಿಕ ಟ್ರಾಫಿಕ್‌ ಸಿಗ್ನಲ್‌ ಆರೋಪ: ಸಚಿವ ಮಹದೇವಪ್ಪ ಪ್ರತಿಕ್ರಿಯೆ

ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್‌ ಸಿಗ್ನಲ್‌ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…

1 hour ago

ದೀದಿ ಸರ್ಕಾರದ ವಿರುದ್ಧ ಅಮಿತ್‌ ಶಾ ಚಾರ್ಜ್‌ಶೀಟ್‌ ರಿಲೀಸ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…

1 hour ago