ಹನೂರು : ಮೈಸೂರು ಕೊಡಗು ಸಂಸದ ಪ್ರತಾಪ್ ಸಿಂಹ ಯುಗಾದಿ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣಾ ನಡೆಯಲಿದ್ದು ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ.
ರಾಜ್ಯಾದ್ಯಂತ ಅಬ್ಬರದ ಪ್ರಚಾರ, ವಾಕ್ಸಮರ ನಡೆಯುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಚುನಾವಣೆಯು ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಇದರ ಮಧ್ಯೆಯು ಹಾಲಿ ಸಂಸದ ಪ್ರತಾಪ್ ಸಿಂಹ ಏಕಾಂಗಿಯಾಗಿ ಶ್ರೀ ಕ್ಷೇತ್ರ ಮಲೆಮಾದೇಶ್ವರ ಬೆಟ್ಟಕ್ಕೆ ಮೊಟ್ಟಮೊದಲ ಬಾರಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಗರ್ಭಗುಡಿ ಮುಂಭಾಗ ಪ್ರಾರ್ಥನೆ ಸಲ್ಲಿಸಿದ್ದಾರೆ.
ನಂತರ ಸಾಲೂರು ಬೃಹನ್ ಮಠಕ್ಕೆ ಭೇಟಿ ನೀಡಿ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ.
ಚುನಾವಣಾದ ಅಬ್ಬರದ ನಡುವೆ ಏಕಾಂಗಿಯಾಗಿ ದೇವರ ದರ್ಶನಕ್ಕೆ ಭೇಟಿ ನೀಡಿರುವುದು ಹಲವು ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…