ಚಾಮರಾಜನಗರ

ಕುರಟ್ಟಿ ಹೊಸೂರು ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಹನೂರು: ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ರಾಜಮ್ಮ ಮತ್ತು ಉಪಾಧ್ಯಕ್ಷರಾಗಿ ಲಲಿತಾ ಆಯ್ಕೆಯಾದರು.

ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪರಿಶಿಷ್ಟ ಪಂಗಡಕ್ಕೂ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಯಲ್ಲಿ 14 ಸದಸ್ಯರ ಸಂಖ್ಯಾಬಲವಿದ್ದು ಬಿಜೆಪಿ ಬೆಂಬಲಿತ ಏಳು ಕಾಂಗ್ರೆಸ್ ಬೆಂಬಲಿತ ಏಳು ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರಾಜಮ್ಮ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಇವರು ಅವಿರೋಧ ಆಯ್ಕೆ ಮಾಡಲಾಯಿತು. ಉಳಿದಂತೆ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಲಲಿತಾ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿ ಮಹಾದೇವಮ್ಮ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಲಲಿತಾರವರಿಗೆ 9 ಮತಗಳು, ಮಹದೇವಮ್ಮ ರವರಿಗೆ 5 ಮತಗಳು ಲಭಿಸಿದ್ದವು. ಅಂತಿಮವಾಗಿ ಅಧ್ಯಕ್ಷರಾಗಿ ರಾಜಮ್ಮ ಉಪಾಧ್ಯಕ್ಷರಾಗಿ ಲಲಿತಾ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಲೋಕೋಪಯೋಗಿ ಇಲಾಖೆಯ ಸುರೇಂದ್ರ ಘೋಷಣೆ ಮಾಡಿದರು. ಸಹ ಚುನಾವಣಾಧಿಕಾರಿಯಾಗಿ ಪಿಡಿಒ ರಂಗರಾಜು ಕರ್ತವ್ಯ ನಿರ್ವಹಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಶಿವು ಮಾತನಾಡಿ ಕಳೆದ ೧೫ ವರ್ಷಗಳ ಅವಧಿಯಲ್ಲಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಅಧಿಕಾರ ಹಿಡಿಯುವಲ್ಲಿ ಕಾಂಗ್ರೆಸ್ ಪಕ್ಷ ಸಾಧ್ಯವಾಗಿರಲಿಲ್ಲ ಆದರೆ ಈ ಬಾರಿ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ನೀಲಮ್ಮ ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಸಂತಸವಾಗಿದೆ. ಮುಂದಿನ ದಿನಗಳಲ್ಲಿ ಮಾಜಿ ಶಾಸಕ ಆರ್ ನರೇಂದ್ರ ಹಾಗೂ ಎಲ್ಲಾ ಸರ್ವ ಸದಸ್ಯರ ಸಹಕಾರ ಪಡೆದು ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಯನ್ನು ಮಾದರಿ ಪಂಚಾಯಿತಿಯನ್ನಾಗಿ ಮಾಡಲು ಶ್ರಮಿಸುತ್ತೇನೆ ಎಂದರು.

ಪಟಾಕಿ ಸಿಡಿಸಿ ಸಿಹಿ ಹಂಚಿದ ಕಾರ್ಯಕರ್ತರು: ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿಗೆ ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ನೀಲಮ್ಮ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಘೋಷಣೆ ಮಾಡುತ್ತಿದ್ದಂತೆ ಕಾರ್ಯಕರ್ತರು ಹಾಗೂ ಬೆಂಬಲಿಗರು ಗ್ರಾಮ ಪಂಚಾಯತಿ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ಸಿಹಿ ವಿತರಣೆ ಮಾಡಿದರು.

ಸೂಕ್ತ ಪೊಲೀಸ್ ಬಂದೋಬಸ್ತ್: ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ಸೂಕ್ಷ್ಮ ಗ್ರಾಮ ಪಂಚಾಯಿತಿ ಆಗಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಮಪುರ ಪೊಲೀಸರು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಿದ್ದರು.

ಈ ವೇಳೆ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ದಂಟಳ್ಳಿ ಶಿವು, ಸರ್ದಾರ್, ರಾಜಾರಾಮ್, ಮಹದೇವಮ್ಮ, ಜಯಲಕ್ಷ್ಮಿ, ಬಸವರಾಜು ಮುಖಂಡರಾದ ಬಸವರಾಜು, ದೇವು ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

1 hour ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

2 hours ago

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

2 hours ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

3 hours ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

3 hours ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

3 hours ago