ಚಾಮರಾಜನಗರ

ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿದ ಖಾಸಗಿ ಬ್ಯಾಂಕ್

ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ ತಿಂಗಳಿಗೆ ೧೧,೨೦೦ ರೂ. ಕಟ್ಟಲು ಒಪ್ಪಿ ಸಾಲ ಪಡೆದಿದ್ದರು.

ಆದರೆ ರೈತ ಜಹುರ್ ಅವರು ೩೦ ತಿಂಗಳು ಮಾಸಿಕ ಕಂತುಗಳನ್ನು ಕಟ್ಟಿದ್ದರು. ಆದರೆ ಅವರ ಅಣ್ಣನಿಗೆ ಅಪಘಾತವಾಗಿದ್ದರಿಂದ ಆಸ್ಪತ್ರೆಗೆ ಹಣ ಖರ್ಚಾಗಿತ್ತು. ಹೀಗಾಗಿ ಎಂಟು ತಿಂಗಳಿನಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

ಆದರೆ ಜನ ಬ್ಯಾಂಕ್‌ನವರು ಇನ್ನೂ ಕೂಡ ೭೨ ತಿಂಗಳು ಅವಧಿ ಮುಗಿಯದೇ ಇದ್ದರೂ ಕೂಡ ಕೇವಲ ಎಂಟು ತಿಂಗಳ ಕಂತು ಬಾಕಿ ಇದ್ದದ್ದನ್ನೇ ಗುರಿಯಾಗಿಸಿ, ಕೋರ್ಟಿಗೆ ಹೋಗಿ ಅನುಮತಿಯನ್ನು ಪಡೆದುಕೊಂಡು ಪೊಲೀಸರ ಭದ್ರತೆಯೊಂದಿಗೆ ರೈತನ ವಾಸದ ಮನೆಗೆ ಬೀಗ ಜಡಿದಿದ್ದಾರೆ.

ಏಕಾಏಕಿ ಮನೆಗೆ ಬೀಗ ಜಡಿದಿರುವುದು ಸರಿಯಲ್ಲ. ರೈತನಿಗೆ ಕಾಲಾವಕಾಶ ನೀಡಬೇಕಿತ್ತು ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ತಿಳಿಸಿದ್ದಾರೆ.

ಆಶ್ಚರ್ಯಕರ ಸಂಗತಿ ಎಂದರೆ ರೈತನಿಗೆ ಇವತ್ತಿನವರೆಗೆ ಯಾವುದೇ ನೋಟಿಸ್ ಕೂಡ ನೀಡಿಲ್ಲ. ನೋಟಿಸ್ ಕೊಟ್ಟಿಲ್ಲವೆಂದು ಕೇಳಿದರೆ ಪತ್ರಿಕೆಯಲ್ಲಿ ಹಾಕಿಸಿದ್ದೇವೆ ಎಂದು ಹೇಳುತ್ತಾರೆ ಎನ್ನುವುದು ರೈತರ ಅಳಲು.

ಕಾನೂನಿನಲ್ಲಿ ಅವಧಿಗೂ ಮೊದಲು ಕಂತು ಕಟ್ಟುವ ವ್ಯವಸ್ಥೆ ಎಲ್ಲಿದೆ? ಅವಧಿಗೂ ಮುನ್ನ ೭೨ ತಿಂಗಳು ಮುಗಿಯದೆ ಮನೆಗೆ ಬೀಗ ಜಡಿಯಲು ಯಾವ ಕಾನೂನು ಇದೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅನ್ಯಾಯದ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಯಾರೇ ಹೋರಾಟ ಮಾಡುವಂತಹ ಸಂದರ್ಭದಲ್ಲಿ ನಮ್ಮೊಂದಿಗೆ ನ್ಯಾಯಾಲಯವಿದೆ ಎಂಬ ನಂಬಿಕೆ ಅಗಾಧವಾಗಿರುತ್ತದೆ, ಆದರೆ ನ್ಯಾಯಾಲಯ ೭೨ ತಿಂಗಳವರೆಗೆ ಕಾಯದೆ, ಇನ್ನೂ ೪೦ ಕಂತು ಬಾಕಿ ಇದ್ದರೂ ಜನ ಬ್ಯಾಂಕ್ ಪರವಾಗಿ ನಿಂತು, ಮನೆಗೆ ಬೀಗ ಜಡಿಸಿರುವುದು ಸರಿಯಲ್ಲ. – ಕಡಬೂರು ಮಂಜುನಾಥ್, ರೈತ ಮುಖಂಡ

ಆಂದೋಲನ ಡೆಸ್ಕ್

Recent Posts

ಮಳವಳ್ಳಿ| ಆಸ್ತಿಗಾಗಿ ತಂದೆಯನ್ನೇ ಕೊಂದ ಪಾಪಿ ಮಗ

ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…

4 hours ago

ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…

4 hours ago

ರೈತ ದಿನಾಚರಣೆಯನ್ನು ರಾಷ್ಟ್ರೀಯ ಹಬ್ಬವನ್ನಾಗಿ ಆಚರಿಸಬೇಕು: ರೈತ ಮುಖಂಡ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಆಗ್ರಹ

ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…

5 hours ago

ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣ: ಶಾಸಕ ಭೈರತಿ ಬಸವರಾಜ್‌ಗೆ ಬಿಗ್‌ ಶಾಕ್‌

ಬೆಂಗಳೂರು: ರೌಡಿಶೀಟರ್‌ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್‌ ಜಾಮೀನು ಅರ್ಜಿಯನ್ನು ಕೋರ್ಟ್‌ ವಜಾಗೊಳಿಸಿದೆ. ಈ…

5 hours ago

ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ

ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್‌ ಎಕ್ಸ್…

5 hours ago

ಹಾಸನ| ಮಗುವಿಗೆ ಜನ್ಮ ನೀಡಿದ ಬಾಲಕಿ: ಆರೋಪಿ ಬಂಧನ

ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್‌ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…

6 hours ago