ಚಾಮರಾಜನಗರ

ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿದ ಖಾಸಗಿ ಬ್ಯಾಂಕ್

ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ ತಿಂಗಳಿಗೆ ೧೧,೨೦೦ ರೂ. ಕಟ್ಟಲು ಒಪ್ಪಿ ಸಾಲ ಪಡೆದಿದ್ದರು.

ಆದರೆ ರೈತ ಜಹುರ್ ಅವರು ೩೦ ತಿಂಗಳು ಮಾಸಿಕ ಕಂತುಗಳನ್ನು ಕಟ್ಟಿದ್ದರು. ಆದರೆ ಅವರ ಅಣ್ಣನಿಗೆ ಅಪಘಾತವಾಗಿದ್ದರಿಂದ ಆಸ್ಪತ್ರೆಗೆ ಹಣ ಖರ್ಚಾಗಿತ್ತು. ಹೀಗಾಗಿ ಎಂಟು ತಿಂಗಳಿನಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

ಆದರೆ ಜನ ಬ್ಯಾಂಕ್‌ನವರು ಇನ್ನೂ ಕೂಡ ೭೨ ತಿಂಗಳು ಅವಧಿ ಮುಗಿಯದೇ ಇದ್ದರೂ ಕೂಡ ಕೇವಲ ಎಂಟು ತಿಂಗಳ ಕಂತು ಬಾಕಿ ಇದ್ದದ್ದನ್ನೇ ಗುರಿಯಾಗಿಸಿ, ಕೋರ್ಟಿಗೆ ಹೋಗಿ ಅನುಮತಿಯನ್ನು ಪಡೆದುಕೊಂಡು ಪೊಲೀಸರ ಭದ್ರತೆಯೊಂದಿಗೆ ರೈತನ ವಾಸದ ಮನೆಗೆ ಬೀಗ ಜಡಿದಿದ್ದಾರೆ.

ಏಕಾಏಕಿ ಮನೆಗೆ ಬೀಗ ಜಡಿದಿರುವುದು ಸರಿಯಲ್ಲ. ರೈತನಿಗೆ ಕಾಲಾವಕಾಶ ನೀಡಬೇಕಿತ್ತು ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ತಿಳಿಸಿದ್ದಾರೆ.

ಆಶ್ಚರ್ಯಕರ ಸಂಗತಿ ಎಂದರೆ ರೈತನಿಗೆ ಇವತ್ತಿನವರೆಗೆ ಯಾವುದೇ ನೋಟಿಸ್ ಕೂಡ ನೀಡಿಲ್ಲ. ನೋಟಿಸ್ ಕೊಟ್ಟಿಲ್ಲವೆಂದು ಕೇಳಿದರೆ ಪತ್ರಿಕೆಯಲ್ಲಿ ಹಾಕಿಸಿದ್ದೇವೆ ಎಂದು ಹೇಳುತ್ತಾರೆ ಎನ್ನುವುದು ರೈತರ ಅಳಲು.

ಕಾನೂನಿನಲ್ಲಿ ಅವಧಿಗೂ ಮೊದಲು ಕಂತು ಕಟ್ಟುವ ವ್ಯವಸ್ಥೆ ಎಲ್ಲಿದೆ? ಅವಧಿಗೂ ಮುನ್ನ ೭೨ ತಿಂಗಳು ಮುಗಿಯದೆ ಮನೆಗೆ ಬೀಗ ಜಡಿಯಲು ಯಾವ ಕಾನೂನು ಇದೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅನ್ಯಾಯದ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಯಾರೇ ಹೋರಾಟ ಮಾಡುವಂತಹ ಸಂದರ್ಭದಲ್ಲಿ ನಮ್ಮೊಂದಿಗೆ ನ್ಯಾಯಾಲಯವಿದೆ ಎಂಬ ನಂಬಿಕೆ ಅಗಾಧವಾಗಿರುತ್ತದೆ, ಆದರೆ ನ್ಯಾಯಾಲಯ ೭೨ ತಿಂಗಳವರೆಗೆ ಕಾಯದೆ, ಇನ್ನೂ ೪೦ ಕಂತು ಬಾಕಿ ಇದ್ದರೂ ಜನ ಬ್ಯಾಂಕ್ ಪರವಾಗಿ ನಿಂತು, ಮನೆಗೆ ಬೀಗ ಜಡಿಸಿರುವುದು ಸರಿಯಲ್ಲ. – ಕಡಬೂರು ಮಂಜುನಾಥ್, ರೈತ ಮುಖಂಡ

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

5 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

7 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

8 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

8 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

11 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

12 hours ago