ಚಾಮರಾಜನಗರ

ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿದ ಖಾಸಗಿ ಬ್ಯಾಂಕ್

ಗುಂಡ್ಲುಪೇಟೆ : ಸಾಲ ಕಟ್ಟಿಲ್ಲ ಎಂದು ರೈತನ ಮನೆ ಜಪ್ತಿ ಮಾಡಿರುವ ಘಟನೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಜಹುರ್ ಅಹಮದ್ ಎಂಬವರು ೪.೫೦ ಲಕ್ಷ ರೂ.ಗಳನ್ನು ಜನ ಬ್ಯಾಂಕ್ ಎಂಬ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ೭೨ ತಿಂಗಳ ಅವಧಿಯಲ್ಲಿ ತಿಂಗಳಿಗೆ ೧೧,೨೦೦ ರೂ. ಕಟ್ಟಲು ಒಪ್ಪಿ ಸಾಲ ಪಡೆದಿದ್ದರು.

ಆದರೆ ರೈತ ಜಹುರ್ ಅವರು ೩೦ ತಿಂಗಳು ಮಾಸಿಕ ಕಂತುಗಳನ್ನು ಕಟ್ಟಿದ್ದರು. ಆದರೆ ಅವರ ಅಣ್ಣನಿಗೆ ಅಪಘಾತವಾಗಿದ್ದರಿಂದ ಆಸ್ಪತ್ರೆಗೆ ಹಣ ಖರ್ಚಾಗಿತ್ತು. ಹೀಗಾಗಿ ಎಂಟು ತಿಂಗಳಿನಿಂದ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ.

ಆದರೆ ಜನ ಬ್ಯಾಂಕ್‌ನವರು ಇನ್ನೂ ಕೂಡ ೭೨ ತಿಂಗಳು ಅವಧಿ ಮುಗಿಯದೇ ಇದ್ದರೂ ಕೂಡ ಕೇವಲ ಎಂಟು ತಿಂಗಳ ಕಂತು ಬಾಕಿ ಇದ್ದದ್ದನ್ನೇ ಗುರಿಯಾಗಿಸಿ, ಕೋರ್ಟಿಗೆ ಹೋಗಿ ಅನುಮತಿಯನ್ನು ಪಡೆದುಕೊಂಡು ಪೊಲೀಸರ ಭದ್ರತೆಯೊಂದಿಗೆ ರೈತನ ವಾಸದ ಮನೆಗೆ ಬೀಗ ಜಡಿದಿದ್ದಾರೆ.

ಏಕಾಏಕಿ ಮನೆಗೆ ಬೀಗ ಜಡಿದಿರುವುದು ಸರಿಯಲ್ಲ. ರೈತನಿಗೆ ಕಾಲಾವಕಾಶ ನೀಡಬೇಕಿತ್ತು ಎಂದು ರೈತ ಮುಖಂಡ ಕಡಬೂರು ಮಂಜುನಾಥ್ ತಿಳಿಸಿದ್ದಾರೆ.

ಆಶ್ಚರ್ಯಕರ ಸಂಗತಿ ಎಂದರೆ ರೈತನಿಗೆ ಇವತ್ತಿನವರೆಗೆ ಯಾವುದೇ ನೋಟಿಸ್ ಕೂಡ ನೀಡಿಲ್ಲ. ನೋಟಿಸ್ ಕೊಟ್ಟಿಲ್ಲವೆಂದು ಕೇಳಿದರೆ ಪತ್ರಿಕೆಯಲ್ಲಿ ಹಾಕಿಸಿದ್ದೇವೆ ಎಂದು ಹೇಳುತ್ತಾರೆ ಎನ್ನುವುದು ರೈತರ ಅಳಲು.

ಕಾನೂನಿನಲ್ಲಿ ಅವಧಿಗೂ ಮೊದಲು ಕಂತು ಕಟ್ಟುವ ವ್ಯವಸ್ಥೆ ಎಲ್ಲಿದೆ? ಅವಧಿಗೂ ಮುನ್ನ ೭೨ ತಿಂಗಳು ಮುಗಿಯದೆ ಮನೆಗೆ ಬೀಗ ಜಡಿಯಲು ಯಾವ ಕಾನೂನು ಇದೆ ಎನ್ನುವುದು ಸಾರ್ವಜನಿಕರ ಪ್ರಶ್ನೆಯಾಗಿದೆ.

ಅನ್ಯಾಯದ ವಿರುದ್ಧ ಮತ್ತು ಸರ್ಕಾರದ ವಿರುದ್ಧ ಯಾರೇ ಹೋರಾಟ ಮಾಡುವಂತಹ ಸಂದರ್ಭದಲ್ಲಿ ನಮ್ಮೊಂದಿಗೆ ನ್ಯಾಯಾಲಯವಿದೆ ಎಂಬ ನಂಬಿಕೆ ಅಗಾಧವಾಗಿರುತ್ತದೆ, ಆದರೆ ನ್ಯಾಯಾಲಯ ೭೨ ತಿಂಗಳವರೆಗೆ ಕಾಯದೆ, ಇನ್ನೂ ೪೦ ಕಂತು ಬಾಕಿ ಇದ್ದರೂ ಜನ ಬ್ಯಾಂಕ್ ಪರವಾಗಿ ನಿಂತು, ಮನೆಗೆ ಬೀಗ ಜಡಿಸಿರುವುದು ಸರಿಯಲ್ಲ. – ಕಡಬೂರು ಮಂಜುನಾಥ್, ರೈತ ಮುಖಂಡ

ಆಂದೋಲನ ಡೆಸ್ಕ್

Recent Posts

ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ ಸಮಸ್ಯೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ನಿರೀಕ್ಷಿತ ಪ್ರಮಾಣದ ಮಳೆ ಬಾರದೇ ಇದ್ದರೂ, ಮುಂದಿನ ಎರಡು ತಿಂಗಳ ಕಾಲ ಕುಡಿಯುವ ನೀರಿಗೆ…

2 hours ago

ಕದನ ವಿರಾಮದ ನಡುವೆ ಮತ್ತೆ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ: 5 ಮಂದಿ ಸಾವು

ಬೈರುತ್:‌ ಲೆಬನಾನ್‌ ಮೇಲೆ ಇಸ್ರೇಲ್‌ ದಾಳಿ ಮುಂದುವರಿದಿದ್ದು, ಇಸ್ರೇಲ್ ಮತ್ತು ಇರಾನ್‌ ಬೆಂಬಲಿತ ಹೆಬ್ಜೊಲ್ಲಾ ನಡುವೆ ಕದನ ವಿರಾಮ ಜಾರಿಗೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ:  ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…

7 hours ago

ಗಾಂಧಿ ಹಾದಿಯಲ್ಲಿ ಹತಳಾದ ಮಾತಂಗಿನಿ ಹಜ್ರಾ

ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…

7 hours ago

ಧರ್ಮವೆಂದು ತಿಳಿದು ತಿಗಣೆ ಇತ್ಯಾದಿಗಳನ್ನು ಕೊಲ್ಲುತ್ತಿದ್ದೆ

ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…

7 hours ago

ಜೂ.28ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…

7 hours ago