ಹನೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ರಾಮಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 25 ಲಕ್ಷ ರೂಪಾಯಿ ಆದಾಯ ಬಂದಿದೆ ಎಂದು ಅಧ್ಯಕ್ಷ ಮುತ್ತುರಾಮ್ ತಿಳಿಸಿದರು.
ತಾಲೂಕಿನ ರಾಮಾಪುರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಾರ್ಷಿಕ ಮಹಾಸಭೆಯಲ್ಲಿ ಅವರು ಮಾತನಾಡಿದರು.
ನಮ್ಮ ಸಹಕಾರ ಸಂಘದ ವತಿಯಿಂದ ರಾಮಾಪುರ ಹೋಬಳಿ ವ್ಯಾಪ್ತಿಯ 362 ಷೇರುದಾರರಿಗೆ 3 ಕೋಟಿ 73 ಲಕ್ಷ ಸಾಲ ನೀಡಲಾಗಿದ್ದು ಎಲ್ಲರೂ ಮರುಪಾವತಿ ಮಾಡಿರುವುದರಿಂದ ಪ್ರಸಕ್ತ ವರ್ಷ 2,34,915ಗಳು ಲಾಭ ಬಂದಿದೆ. ನಾವು ಅಧಿಕಾರಕ್ಕೆ ಬರುವ ಮುನ್ನ 7 ಲಕ್ಷ ಸಾಲದ ಸುಳಿಯಲ್ಲಿ ಇದ್ದು. ಅಧಿಕಾರ ವಹಿಸಿಕೊಂಡ ನಾಲ್ಕು ವರ್ಷಗಳಲ್ಲಿ ಎಲ್ಲಾ ಸರ್ವ ಸದಸ್ಯರ ಸಹಕಾರದಿಂದ ಸಂಘವನ್ನು ಲಾಭದತ್ತ ಕೊಂಡೊಯ್ದಿದ್ದೇನೆ. ಷೇರುದಾರ ಕುಟುಂಬಗಳಿಗೆ ಯಾವುದೇ ರೀತಿಯ ಶುಲ್ಕವಿಲ್ಲದೆ ಉಚಿತ ಯಶಸ್ವಿನಿ ಯೋಜನೆ ಮಾಡಿಸಿಕೊಟ್ಟಿದ್ದೇವೆ. ಇದಲ್ಲದೆ ಸಂಘದ ವತಿಯಿಂದ ತೆರೆಯಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕದಿಂದ 2 ಲಕ್ಷ ರೂಪಾಯಿ ಆದಾಯ ಬಂದಿದೆ, ಸಂಘವು 18 ಲಕ್ಷ ಲಾಭ ಪಡೆದಿರುವುರಿಂದ ಹದಿನೈದು ಲಕ್ಷ ಲಾಭದ ಹಣವನ್ನು ಎಫ್ ಡಿ ಮಾಡಲಾಗಿದೆ ಎಂದು ತಿಳಿಸಿದರು.
ರಾಮಪುರ ಹೋಬಳಿ ವ್ಯಾಪ್ತಿಯ ರೈತರವರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಸಗೊಬ್ಬರ ಮಾರಾಟ ಹಾಗೂ ನ್ಯಾಯಬೆಲೆ ಅಂಗಡಿ ತೆರೆಯಲು ಈಗಾಗಲೇ ಅರ್ಜಿ ಸಲ್ಲಿಸಿದ್ದೇವೆ. ಅನುಮತಿ ಸಿಕ್ಕರೆ ಇನ್ನಷ್ಟು ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಕೆಲವೊಮ್ಮೆ ಮಳೆಗಾಲದ ಸಂದರ್ಭದಲ್ಲಿ ನಮ್ಮ ಭಾಗದ ರೈತರು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆ ಕೊಟ್ಟು ರಸಗೊಬ್ಬರಗಳನ್ನು ತೆಗೆದುಕೊಳ್ಳುವ ಪರಿಸ್ಥಿತಿ ಇದೆ .ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ರಸಗೊಬ್ಬರ ಮಾರಾಟ ಮಾಡಲು ಆದಷ್ಟು ಬೇಗ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಉಪಾಧ್ಯಕ್ಷರಾದ ಮೋಟೆಯ್ಯ ಗೌಂಡರ್, ನಿರ್ದೇಶಕರುಗಳಾದ ಎಂ ಕೃಷ್ಣ ನಾಯಕ್, ಮಹಾದೇವ ಎಂ, ಕೃಷ್ಣಮೂರ್ತಿ ಕೆ, ಸಿಂಗಾರ ವೇಲನ್, ಕೃಷ್ಣಮೂರ್ತಿ ಸಿ, ಜ್ಯೋತಿ, ಸುರೇಶ್, ಜಿಲ್ಲಾ ಸಹಕಾರ ಕೇಂದ್ರದ ಬ್ಯಾಂಕ್ ಪ್ರತಿನಿಧಿ ಬಾಲಾಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ್ ಸಹಾಯಕಿ ಶ್ವೇತ, ಮುಖಂಡರಾದ ಅಶ್ವಥ್ ಹಾಜರಿದ್ದರು.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…