ಚಾಮರಾಜನಗರ

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ತಿಳಿಸಿದರು.

ಹನೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕುಡಿಯುವ ನೀರಿನ ಪೂರೈಕೆ, ಸಮಸ್ಯೆ ಪರಿಶೀಲಿಸಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಹನೂರು ತಾಲೂಕಿನ 46 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಕುಡಿಯುವ ನೀರು ಪೂರೈಕೆ ಮಾಡಲು ತ್ವರಿತ ಕ್ರಮ ವಹಿಸಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಚಾಮರಾಜನಗರ ಮತ್ತು ಹನೂರು ತಾಲೂಕಿನ ವಿವಿಧೆಡೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಿದೆ. ಹನೂರು ತಾಲೂಕು ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮಳೆಯಾಗದೆ ನೀರಿಗೆ ಪರಿತಪಿಸುತ್ತಿರುವ ಬಗ್ಗೆ ಈಗಾಗಲೇ ಸರ್ಕಾರದ ಗಮನಕ್ಕೆ ಬಂದಿದೆ. ಸಮಸ್ಯೆ ಇರುವ ಕಡೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಕೆಲವು ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಆಗದಿರುವ ಬಗ್ಗೆ ದೂರುಗಳು ಬಂದಿದೆ ಎಂದು ಮಾಹಿತಿ ನೀಡಿದರು.

ಕುಡಿಯುವ ನೀರು ಪೂರೈಕೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ‌. ಈ ನಿಟ್ಟಿನಲ್ಲಿ ಯಾವುದೇ ಗ್ರಾಮಗಳಲ್ಲಿಯೂ ಸಾರ್ವಜನಿಕರು ಹಾಗೂ ಜನಜಾನುವಾರುಗಳಿಗೆ ಯಾವುದೇ ಸಮಸ್ಯೆ ಆಗದಂತೆ ಕಳೆದ ಎರಡು ತಿಂಗಳಿನಿಂದ ಟ್ಯಾಂಕರ್ ನೀರು ಪೂರೈಕೆ ಮಾಡುತ್ತಿದ್ದಾರೆ.‌ ಅದೇ ರೀತಿ ನಮ್ಮ ಸರ್ಕಾರವು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ ಎಂದರು.

ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇರುವುದು ಗಮನಕ್ಕೆ ಬಂದಿತ್ತು. ಆದರೆ, ವಾಸ್ತವ ತಿಳಿದುಕೊಳ್ಳಲು ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ ಎಂದರು.

ಚಾಮರಾಜನಗರ ಜಿಲ್ಲೆಯಲ್ಲಿ ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆಯಾಗದೆ ರೈತರು ಸಂಕಷ್ಟಕ್ಕೇಡಾಗಿದ್ದಾರೆ ಈ ಸಂಬಂಧ ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡುವಂತೆ ರೈತರು ಒತ್ತಾಯಿಸಿದ್ದಾರೆ. ಈಗಾಗಲೇ ಜಿಲ್ಲಾಡಳಿತ ಸರ್ಕಾರಕ್ಕೆ ಚಾಮರಾಜನಗರ ಜಿಲ್ಲೆಯನ್ನು ಬರಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಲು ವರದಿ ನೀಡಿದ್ದಾರೆ, ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.

ಹನೂರು ತಾಲೂಕಿನಲ್ಲಿ ಮಾನವ- ವನ್ಯಜೀವಿ ಸಂಘರ್ಷ ಸಂಘರ್ಷ ಹೆಚ್ಚುತ್ತಿರುವ ಕುರಿತು ಪ್ರತಿಕ್ರಿಯಿಸಿ, ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಮಾನವ ಪ್ರಾಣಿ ಸಂಘರ್ಷ ತಡೆಗೆ ಕ್ರಮ ವಹಿಸಲು ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಪರಿಣಾಮಕಾರಿಯಾಗಿ ಅಗತ್ಯ ಕ್ರಮ ವಹಿಸಲಾಗುವುದು, ಮಲೆ ಮಹದೇಶ್ವರ ವನ್ಯಜೀವಿಧಾಮ, ಕಾವೇರಿ ವನ್ಯಜೀವಿಧಾಮಗಳಿಗೆ ಬೇರೆಡೆಯಿಂದ ಚಿರತೆಗಳನ್ನು ಬಿಡುತ್ತಿಲ್ಲ ಒಂದೊಮ್ಮೆ ಬಿಡಲು ಮುಂದಾದರೇ ತಡೆಯಲು ಕ್ರಮ ವಹಿಸುತ್ತೇನೆ ಎಂದು ಭರವಸೆ ಕೊಟ್ಟರು.

ಚಿರತೆ ದಾಳಿಗೆ ಬಾಲಕ ಬಲಿಯಾದ ಘಟನೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಲೋಪ ಇರುವ ಮಾಹಿತಿ ಬಂದಿದೆ.ಅರಣ್ಯ ಸಚಿವರ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು, ಚಿರತೆ ಸೆರೆಗೆ ಜಿಲ್ಲಾಡಳಿತದ ವತಿಯಿಂದ ಥರ್ಮಲ್ ಡ್ರೋಣ್ ನೀಡಲಾಗಿದೆ. ಅರಣ್ಯ ಇಲಾಖೆಯವರು ಕೂಡ ಚಿರತೆ ಸೆರೆಗೆ ನಿರಂತರ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಕಾದು ನೋಡೋಣ ಎಂದರು.

ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ವೇಳೆ ಶಾಸಕ ಎಂಆರ್ ಮಂಜುನಾಥ್, ಜಿಲ್ಲಾಧಿಕಾರಿ ಶ್ರೀ ರೂಪ, ಜಿಪಂ ಸಿಇಓ ಮೊನಾರೋತ್, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಉಪ ಕಾರ್ಯದರ್ಶಿ ಶೃತಿ, ತಹಸಿಲ್ದಾರ್‌ಗಳಾದ ಚೈತ್ರಾ ಹಾಗೂ ಬಸವರಾಜು, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಡಿವೈಎಸ್ಪಿ ಮೋಹನ್ ಇನ್ಸ್ಪೆಕ್ಟರ್ ಆನಂದ್ ಮೂರ್ತಿ ಇಒ ಉಮೇಶ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಇ ಸಂತೋಷ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

16 mins ago

ನೈಸ್ ಯೋಜನೆ ಸರ್ಕಾರದ ವಶಕ್ಕೆ ; ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದು ಒತ್ತಾಯಿಸಿದ ಹೆಚ್.ಡಿ.ಕುಮಾರಸ್ವಾಮಿ

ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…

27 mins ago

ಚಾಮರಾಜನಗರ ಶೂಟೌಟ್‌ ಪ್ರಕರಣ: ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ

ಕೊಡಗು: ಚಾಮರಾಜನಗರದ ಹನೂರಿನಲ್ಲಿ ನಡೆದ ಶೂಟೌಟ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಕೊಡಗಿನಲ್ಲಿ ಮಾಧ್ಯಮದವರು…

2 hours ago

ಸಿಎಂ ಆದ ಬಳಿಕ ಮೊದಲ ಬಾರಿಗೆ ಕೊಡಗಿಗೆ ಡಿಕೆಶಿ ಭೇಟಿ

ಕೊಡಗು: ಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಕೊಡಗಿಗೆ ಭೇಟಿ ನೀಡಿದ್ದಾರೆ. ಕೊಡಗಿಗೆ ಆಗಮಿಸುತ್ತಿದ್ದಂತೆ ಕೊಡವ ಸಂಪ್ರದಾಯದಂತೆ ಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಕೊಡವತಿಯರು…

3 hours ago

ಕೊಲೆ ಆರೋಪಿ ಪವಿತ್ರಾಗೌಡ ಬೇರೆ ಸೆಲ್‌ಗೆ ಶಿಫ್ಟ್‌

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡರನ್ನು ಪರಪ್ಪನ ಅಗ್ರಹಾರದಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ…

3 hours ago

ಶೂಟೌಟ್ ಪ್ರಕರಣ: ಇನ್ಸ್‌ಪೆಕ್ಟರ್ ಮೇಲೆ ಹಲ್ಲೆಗೆ ಯತ್ನ: ಪೊಲೀಸರ ಲಘು ಲಾಟಿ ಪ್ರಹಾರ, 5 ಮಂದಿ ವಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ…

5 hours ago