ಚಾಮರಾಜನಗರ

ಹನೂರು| ಮಹಿಳಾ ಮೀಸಲಾತಿ ಮಸೂದೆ ವಿರೋಧಿಸಿದ ಕಾಂಗ್ರೆಸ್‌ ಮತ್ತು ಮಿತ್ರಪಕ್ಷಗಳ ವಿರುದ್ಧ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕೇಂದ್ರ ಸರ್ಕಾರ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಜಾರಿಗೆ ತರಲು ಮುಂದಾದ ಶೇ.೩೩ರಷ್ಟು ಮಹಿಳಾ ಮೀಸಲಾತಿಯ ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್ ಹಾಗೂ ಮಿತ್ರ ಪಕ್ಷಗಳ ವಿರುದ್ಧ ಮಲೆ ಮಹದೇಶ್ವರ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಮೀನಾ ನೇತೃತ್ವದಲ್ಲಿ ಕೌದಳ್ಳಿ ಗ್ರಾಮದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ತಾಲೂಕಿನ ಕೌದಳ್ಳಿ ಗ್ರಾಮದ ಮಹದೇಶ್ವರ ಬೆಟ್ಟಕ್ಕೆ ತೆರಳುವ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಅಲ್ಲಿಂದ ಮೆರವಣಿಗೆಯಲ್ಲಿ ಗ್ರಾಮ ಪಂಚಾಯಿತಿ ಕಚೇರಿವರೆಗೂ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಹಾಗೂ ಇತರೆ ಮಿತ್ರ ಪಕ್ಷಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಹಿಳಾ ಮೋರ್ಚಾ ಅಧ್ಯಕ್ಷೆ ಮೀನಾ ಮಾತನಾಡಿ, ದೇಶದಲ್ಲಿ ೭೦ ಕೋಟಿ ಮಹಿಳೆಯರಿದ್ದು, ನಮ್ಮ ಹಕ್ಕನ್ನು ಕೇಳುವಂತಹ ಪರಿಸ್ಥಿತಿ ಬಂದಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದಾಗಲೇ ಮಹಿಳೆಯರಿಗೆ ರಾಜಕೀಯ ಹಕ್ಕು ಕೊಡಬೇಕು ಎಂದು ಹೇಳಲಾಗುತ್ತದೆ. ೨೦೨೩ರಲ್ಲಿ ಬಿಲ್ ಪಾಸ್ ಆಗಿದೆ. ಆದರೆ ಬಿಲ್ ಪಾಸ್ ಆಗಿದ್ದರೂ ಜಾರಿಗೆ ತರದಿರುವುದು ವಿಪರ್ಯಾಸ ಎಂದರು.

ಮಹಿಳೆಯರನ್ನು ಹಿಂದೆ ಎಳೆಯುವಂತ ಕೆಲಸ ಬೇಡ. ಶೇ.೫೦ರಷ್ಟು ಮಹಿಳೆಯರಿದ್ದೇವೆ. ಆದರೆ, ಶೇ.೩೩ ರಷ್ಟು ಕೊಡಲು ಒದ್ದಾಡುತ್ತಿದ್ದು ೨೦೨೩ರಲ್ಲಿ ನಾರಿಶಕ್ತಿ ವಂದನ್ ಅಧಿನಿಯಮ ಆಗಿದೆ. ಅದನ್ನು ೨೦೨೬ರಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು. ೧೯೭೧ರ ಜನಸಂಖ್ಯೆ ಇಟ್ಟುಕೊಂಡು ಸಂಸತ್ ಹಾಗೂ ವಿಧಾನಸಭೆಯಲ್ಲಿ ಅಂಕಿಅಂಶಗಳನ್ನು ನೋಡಿದಾಗ ರಾಜ್ಯದಲ್ಲಿ ೨೪೪ಕ್ಕೆ ಇರುವಂತದ್ದು ೨೦-೩೦ ಅಲ್ಲದೇ ಸಂಸತ್‌ನಲ್ಲಿ ೭೫-೮೦ ರಷ್ಟು ಮಹಿಳೆಯರಿದ್ದೇವೆ ಎಂದರು.

ಮಹಿಳೆಯರಲ್ಲಿ ಸಾಕಷ್ಟು ಸಾಮರ್ಥ್ಯಗಳಿದ್ದು ಪಕ್ಷಾತೀತವಾಗಿ ಮಹಿಳೆಯರಿಗೆ ಇರುವ ಶೇ.೩೩ರಷ್ಟು ಮೀಸಲಾತಿಯನ್ನು ಜಾರಿಗೆ ತರಬೇಕು. ೨೦೧೧ ಜನಗಣತಿಯನ್ನು ಇಟ್ಟುಕೊಂಡರು ಮಹಿಳೆಯರಿಗೆ ಶೇ.೩೩ ರಷ್ಟು ಮೀಸಲಾತಿ ಕೊಡಬಹುದು. ಎಲ್ಲ ರಾಜಕೀಯ ಪಕ್ಷಗಳು ಮಹಿಳೆಯರಿಗೆ ವಿರೋಧವಾಗಿದೆ. ಗ್ರಾಪಂ, ತಾಪಂ, ಜಿಪಂ ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಅವಕಾಶ ಕಲ್ಪಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಮಲೆಯೂರು ಕಮಲಮ್ಮ, ಪ್ರಧಾನ ಕಾರ್ಯದರ್ಶಿ ಶೈಲ, ಮಂಡಲ ಪ್ರಧಾನ ಕಾರ್ಯದರ್ಶಿ ರಾಧಾ, ಉಪಾಧ್ಯಕ್ಷೆ ಈಶ್ವರಿ, ಕಾರ್ಯದರ್ಶಿ ಶೋಭಾ, ಜ್ಯೋತಿ ಪ್ರೇಮಾ, ಸೆಲ್ವಿ, ನಿರ್ಮಲ. ರಂಜಿನಿ ಮಂಜು, ವಿಜಯ ಸೇರಿದಂತೆ ಐವತ್ತಕ್ಕೂ ಹೆಚ್ಚು ಮಹಿಳಾ ಸದಸ್ಯರು ಭಾಗಿಯಾಗಿದ್ದರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

4 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

4 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

4 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

4 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

4 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

4 hours ago