ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರದ ವಿದ್ಯುತ್ ಖಾಸಗಿಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಇಂಧನ ಇಲಾಖೆ ಸಾರ್ವಜನಿಕರ ಆಸ್ತಿ ಇದನ್ನು ಖಾಸಗಿಕರಣ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಅನುಕೂಲವಾಗಲಿ ಎಂಬುವ ನಿಟ್ಟಿನಲ್ಲಿ 200 ಯೂನಿಟ್ ಗಳ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿ ಮರಣ ಶಾಸನವನ್ನು ರಚಿಸಲು ಹೊರಟಿದೆ. ಇದನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ಇದು ಮಂಡನೆ ಆದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ರೈತ ದೇಶದ ಬೆನ್ನೆಲುಬು. ರೈತರಿಗೆ ಸರ್ಕಾರ ಹಲವು ಯೋಜನೆಯಡಿ ವಿದ್ಯುತ್ ನೀಡಲಾಗುತ್ತಿದೆ. ರೈತ ಕಷ್ಟಪಟ್ಟು ದೇಶಕ್ಕೆ ಹಣ ನೀಡುತ್ತಾನೆ. ಅಂತಹವರಿಗೆ ತೊಂದರೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರೈತನಿಂದ ಪ್ರಾರಂಭವಾಗಿ ಕೈಗಾರಿಕೆಯವರೆಗೂ ಖಾಸಗೀಕರಣ ಮಾಡಿದರೆ ಯಾರೊಬ್ಬರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಅನ್ನದಾತರಾದ ರೈತರಿಗೆ ಅನ್ಯಾಯ ಮಾಡಿ 2026ರ ಅಧಿವೇಶದಲ್ಲಿ ವಿದ್ಯುತ್ ಕಾಯಿದೆ ಬಿಲ್ಲನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿಧವನ್ನು ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ವಿದ್ಯುತ್ ಇಲಾಖೆಯು ಹಲವಾರು ನೌಕರರ ಬಲಿದಾನದಿಂದ ಕಷ್ಟಪಟ್ಟು ಕಟ್ಟಿರುವ ಬೃಹತ್ ಸಂಸ್ಥೆ ಈ ಸಂಸ್ಥೆಯನ್ನು ಖಾಸಗಿಕರಣ ಮಾಡಲು ವಿದ್ಯುತ್ ಕಾಯ್ದೆ ಬಿಲ್ ಪಾಸ್ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಮೊಹಮ್ಮದ್ ರಿಯಾಜ್, ಮಣಿಕಂಠ, ಮನೋಜ್ ಕುಮಾರ್, ನಾಗೇಂದ್ರ, ಕವಿರಾಜು, ರಘುನಂದನ್ ಸದಸ್ಯರಾದ ಅರ್ಜುನ್, ವೆಂಕಟೇಶ್ ಮೂರ್ತಿ, ನವೀನ್,ಮಂಜೇಶ್, ಶಾದಬ್, ಕಿರಿಯ ಅಭಿಯಂತರಗಳಾದ ಮಹೇಶ್, ವೆಂಕಟೇಶ್ ಸೇರಿದಂತೆ ಹನೂರು ವಿಭಾಗದ ಎಲ್ಲಾ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…
ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…
ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್ಗೆ…
ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…
ಆರ್ಎಸ್ಎಸ್ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…
ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…