ಚಾಮರಾಜನಗರ

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿದ್ಯುತ್ ಖಾಸಗಿಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಇಂಧನ ಇಲಾಖೆ ಸಾರ್ವಜನಿಕರ ಆಸ್ತಿ ಇದನ್ನು ಖಾಸಗಿಕರಣ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಅನುಕೂಲವಾಗಲಿ ಎಂಬುವ ನಿಟ್ಟಿನಲ್ಲಿ 200 ಯೂನಿಟ್ ಗಳ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿ ಮರಣ ಶಾಸನವನ್ನು ರಚಿಸಲು ಹೊರಟಿದೆ. ಇದನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ಇದು ಮಂಡನೆ ಆದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತ ದೇಶದ ಬೆನ್ನೆಲುಬು. ರೈತರಿಗೆ ಸರ್ಕಾರ ಹಲವು ಯೋಜನೆಯಡಿ ವಿದ್ಯುತ್ ನೀಡಲಾಗುತ್ತಿದೆ. ರೈತ ಕಷ್ಟಪಟ್ಟು ದೇಶಕ್ಕೆ ಹಣ ನೀಡುತ್ತಾನೆ. ಅಂತಹವರಿಗೆ ತೊಂದರೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರೈತನಿಂದ ಪ್ರಾರಂಭವಾಗಿ ಕೈಗಾರಿಕೆಯವರೆಗೂ ಖಾಸಗೀಕರಣ ಮಾಡಿದರೆ ಯಾರೊಬ್ಬರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಅನ್ನದಾತರಾದ ರೈತರಿಗೆ ಅನ್ಯಾಯ ಮಾಡಿ 2026ರ ಅಧಿವೇಶದಲ್ಲಿ ವಿದ್ಯುತ್ ಕಾಯಿದೆ ಬಿಲ್ಲನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿಧವನ್ನು ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಇಲಾಖೆಯು ಹಲವಾರು ನೌಕರರ ಬಲಿದಾನದಿಂದ ಕಷ್ಟಪಟ್ಟು ಕಟ್ಟಿರುವ ಬೃಹತ್ ಸಂಸ್ಥೆ ಈ ಸಂಸ್ಥೆಯನ್ನು ಖಾಸಗಿಕರಣ ಮಾಡಲು ವಿದ್ಯುತ್ ಕಾಯ್ದೆ ಬಿಲ್ ಪಾಸ್ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಮೊಹಮ್ಮದ್ ರಿಯಾಜ್, ಮಣಿಕಂಠ, ಮನೋಜ್ ಕುಮಾರ್, ನಾಗೇಂದ್ರ, ಕವಿರಾಜು, ರಘುನಂದನ್ ಸದಸ್ಯರಾದ ಅರ್ಜುನ್, ವೆಂಕಟೇಶ್ ಮೂರ್ತಿ, ನವೀನ್,ಮಂಜೇಶ್, ಶಾದಬ್, ಕಿರಿಯ ಅಭಿಯಂತರಗಳಾದ ಮಹೇಶ್, ವೆಂಕಟೇಶ್ ಸೇರಿದಂತೆ ಹನೂರು ವಿಭಾಗದ ಎಲ್ಲಾ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

7 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

10 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

11 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

11 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

12 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

12 hours ago