ಚಾಮರಾಜನಗರ

ಹನೂರು| ವಿದ್ಯುತ್‌ ಖಾಸಗೀಕರಣ ವಿರೋಧಿಸಿ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ವಿದ್ಯುತ್ ಖಾಸಗೀಕರಣ ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನೌಕರರ ಸಂಘದ ಪದಾಧಿಕಾರಿಗಳು ಸದಸ್ಯರು ಸೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿದ್ಯುತ್ ಖಾಸಗಿಕರಣ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ನೌಕರರು ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.

ಕೆಪಿಟಿಸಿಎಲ್ ನೌಕರರ ಸಂಘದ ಅಧ್ಯಕ್ಷ ರಾಜೇಂದ್ರ ಪ್ರಸಾದ್ ಮಾತನಾಡಿ, ಕೇಂದ್ರ ಸರ್ಕಾರ ವಿದ್ಯುತ್ ಇಲಾಖೆಯನ್ನು ಖಾಸಗೀಕರಣ ಮಾಡುತ್ತಿರುವುದರಿಂದ ಮುಂದಿನ ದಿನದಲ್ಲಿ ಪ್ರತಿಯೊಬ್ಬರಿಗೂ ತೊಂದರೆಯಾಗಲಿದೆ. ಇಂಧನ ಇಲಾಖೆ ಸಾರ್ವಜನಿಕರ ಆಸ್ತಿ ಇದನ್ನು ಖಾಸಗಿಕರಣ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ ರಾಜ್ಯ ಸರ್ಕಾರ ಪ್ರತಿಯೊಬ್ಬರಿಗೂ ಅನುಕೂಲವಾಗಲಿ ಎಂಬುವ ನಿಟ್ಟಿನಲ್ಲಿ 200 ಯೂನಿಟ್ ಗಳ ಉಚಿತ ವಿದ್ಯುತ್ ನೀಡುತ್ತಿದೆ. ಆದರೆ ಕೇಂದ್ರ ಸರ್ಕಾರ ಖಾಸಗೀಕರಣ ಮಾಡಿ ಮರಣ ಶಾಸನವನ್ನು ರಚಿಸಲು ಹೊರಟಿದೆ. ಇದನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭೆಯಲ್ಲಿ ಇದು ಮಂಡನೆ ಆದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

ರೈತ ದೇಶದ ಬೆನ್ನೆಲುಬು. ರೈತರಿಗೆ ಸರ್ಕಾರ ಹಲವು ಯೋಜನೆಯಡಿ ವಿದ್ಯುತ್ ನೀಡಲಾಗುತ್ತಿದೆ. ರೈತ ಕಷ್ಟಪಟ್ಟು ದೇಶಕ್ಕೆ ಹಣ ನೀಡುತ್ತಾನೆ. ಅಂತಹವರಿಗೆ ತೊಂದರೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ರೈತನಿಂದ ಪ್ರಾರಂಭವಾಗಿ ಕೈಗಾರಿಕೆಯವರೆಗೂ ಖಾಸಗೀಕರಣ ಮಾಡಿದರೆ ಯಾರೊಬ್ಬರು ನೆಮ್ಮದಿಯಿಂದ ಇರಲು ಸಾಧ್ಯವಿಲ್ಲ. ಅನ್ನದಾತರಾದ ರೈತರಿಗೆ ಅನ್ಯಾಯ ಮಾಡಿ 2026ರ ಅಧಿವೇಶದಲ್ಲಿ ವಿದ್ಯುತ್ ಕಾಯಿದೆ ಬಿಲ್ಲನ್ನು ತಿದ್ದುಪಡಿ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿಧವನ್ನು ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ವಿದ್ಯುತ್ ಇಲಾಖೆಯು ಹಲವಾರು ನೌಕರರ ಬಲಿದಾನದಿಂದ ಕಷ್ಟಪಟ್ಟು ಕಟ್ಟಿರುವ ಬೃಹತ್ ಸಂಸ್ಥೆ ಈ ಸಂಸ್ಥೆಯನ್ನು ಖಾಸಗಿಕರಣ ಮಾಡಲು ವಿದ್ಯುತ್ ಕಾಯ್ದೆ ಬಿಲ್ ಪಾಸ್ ಮಾಡಲು ಹೊರಟಿರುವ ಕೇಂದ್ರ ಸರ್ಕಾರದ ವಿರುದ್ಧ ಶಾಂತಿಯುತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕೂಡಲೇ ಕೇಂದ್ರ ಸರ್ಕಾರ ಈ ಕಾಯ್ದೆಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕೆಪಿಟಿಸಿಎಲ್ ನೌಕರರ ಸಂಘದ ಕಾರ್ಯದರ್ಶಿ ಮಹದೇವಸ್ವಾಮಿ, ಪದಾಧಿಕಾರಿಗಳಾದ ಮೊಹಮ್ಮದ್ ರಿಯಾಜ್, ಮಣಿಕಂಠ, ಮನೋಜ್ ಕುಮಾರ್, ನಾಗೇಂದ್ರ, ಕವಿರಾಜು, ರಘುನಂದನ್ ಸದಸ್ಯರಾದ ಅರ್ಜುನ್, ವೆಂಕಟೇಶ್ ಮೂರ್ತಿ, ನವೀನ್,ಮಂಜೇಶ್, ಶಾದಬ್, ಕಿರಿಯ ಅಭಿಯಂತರಗಳಾದ ಮಹೇಶ್, ವೆಂಕಟೇಶ್ ಸೇರಿದಂತೆ ಹನೂರು ವಿಭಾಗದ ಎಲ್ಲಾ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕಾವೇರಿ ನದಿ ನೀರಿನ ವಿವಾದಕ್ಕೆ ಮಾತುಕತೆಯೇ ಮದ್ದು

ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…

24 mins ago

ಓದುಗರ ಪತ್ರ: ಈ ‘ಎರಡು’ ಸಮಸ್ಯೆಗಳಿಗೆ ಪರಿಹಾರ ಸಿಗಬೇಕು

ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…

27 mins ago

ಓದುಗರ ಪತ್ರ: ಸ್ಥಳ ಶುದ್ಧೀಕರಣಕ್ಕಿಂತ ಮನ ಶುದ್ಧೀಕರಣವಾಗಲಿ

ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…

29 mins ago

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

5 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

5 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

5 hours ago