ಚಾಮರಾಜನಗರ

ಉಡುತೊರೆ ಜಲಾಶಯ ಭರ್ತಿಯಾದರೂ ನೀರು ಬಿಡದ ಅಧಿಕಾರಿಗಳ ವಿರುದ್ಧ ಪ್ರತಿಭಟನೆಗೆ ನಿರ್ಧಾರ

ಹನೂರು: ತಾಲೂಕಿನ ಉಡುತೊರೆ ಜಲಾಶಯ ಭರ್ತಿಯಾಗಿದ್ದರೂ ರೈತರ ಬೆಳೆಗಳಿಗೆ ನೀರು ಬಿಡದೆ ಇರುವುದನ್ನು ಖಂಡಿಸಿ ನವೆಂಬರ್ 4ರಂದು ಅಜ್ಜೀಪುರ ಗ್ರಾಮದ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ ಅಮ್ದಾದ್ ಖಾನ್ ತಿಳಿಸಿದರು.

ಹನೂರು ಪಟ್ಟಣದ ಲೋಕೋಪಯೋಗಿ ವಸತಿಗೃಹದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರ ಅಜ್ಜೀಪುರ, ರಾಮಾಪುರ, ಕೌದಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲ ಕಲ್ಪಿಸಲು ಕೊಟ್ಯಾಂತರ ರೂಪಾಯಿ ವೆಚ್ಚ ಮಾಡಿ ಉಡುತೊರೆ ಜಲಾಶಯ ನಿರ್ಮಾಣ ಮಾಡಿದೆ. ಕಳೆದ ಎರಡು ವರ್ಷಗಳ ಕಾಲ ಸತತ ಬರಗಾಲವಿದ್ದರಿಂದ ರೈತರು ತೀವ್ರ ತೊಂದರೆ ಅನುಭವಿಸಿದ್ದರು. ವರುಣನ ಕೃಪೆಯಿಂದ ಕಳೆದ ಒಂದು ತಿಂಗಳಿನಿಂದ ಸತತ ಮಳೆಯಾಗುತ್ತಿರುವ ಹಿನ್ನೆಲೆ ಡ್ಯಾಮ್ ಭರ್ತಿಯಾಗುತ್ತಿದೆ. ಆದರೆ ಕಸ ಕಡ್ಡಿಗಳು ಗಿಡಗಂಟಿಗಳು ಬೆಳೆದಿರುವುದರಿಂದ ಕೊನೆಯ ಭಾಗದವರೆಗೆ ಜಲಾಶಯ ನೀರು ತಲುಪುತ್ತಿಲ್ಲ ಈ ಸಂಬಂಧ ಅಧಿಕಾರಿಗಳಿಗೆ ಮುಖ್ಯ ಕಾಲುವೆ ದುರಸ್ತಿ ಪಡಿಸುವಂತೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಈ ನಿಟ್ಟಿನಲ್ಲಿ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ನಿರ್ಲಕ್ಷ ಖಂಡಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದರು.

ಜಿಲ್ಲಾ ಸಂಚಾಲಕ ಶೈಲೇಂದ್ರ ಮಾತನಾಡಿ ಅರಣ್ಯ ಇಲಾಖೆ ಮಲೆ ಮಹದೇಶ್ವರ ಬೆಟ್ಟ, ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಗಳ ಗ್ರಾಮಗಳಿಗೆ ಅರಣ್ಯ ಹಕ್ಕು ಕಾಯ್ದೆಯಡಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿ ಕೊಡಬೇಕಿದೆ ಆದರೆ ಇದುವರೆಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿಲ್ಲ, ಸರ್ಕಾರದ ಕಾನೂನನ್ನೇ ಉಲ್ಲಂಘನೆ ಮಾಡಿರುವ ಹಿರಿಯ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು, ಇನ್ನು ಸ್ವತಂತ್ರ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳ ಗ್ರಾಮ ಠಾಣೆಯನ್ನು ನಿಗದಿ ಮಾಡಲಾಗಿದೆ. ಸರ್ಕಾರ ಹೊಸದಾಗಿ ಗ್ರಾಮ ಠಾಣೆ ಸರ್ವೆ ಮಾಡುವಂತೆ ಸೂಚನೆ ನೀಡಿದ್ದರೂ ಇದುವರೆಗೂ ಸರ್ವೆ ಮಾಡದೆ ಇರುವುದರಿಂದ ನಿವಾಸಿಗಳಿಗೆ ತೊಂದರೆಯಾಗಿದೆ. ಈ ಹಿನ್ನೆಲೆ ಈ ಕೂಡಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹೊಸದಾಗಿ ಸರ್ವೆ ಮಾಡಿಸಿ ಸ್ಥಳೀಯ ನಿವಾಸಿಗಳಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಉಪಾಧ್ಯಕ್ಷ ಗೌಡೇಗೌಡ ಮಾತನಾಡಿ ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆ ಹೋಗುವವರಿಗೆ ಅರಣ್ಯ ಇಲಾಖೆ ವತಿಯಿಂದ 200 ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. ಕಾಡಂಚಿನ ಗ್ರಾಮಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು ಅರಣ್ಯ ಇಲಾಖೆಯವರು ತೊಂದರೆ ಕೊಡುತ್ತಿದ್ದಾರೆ. ಆದರೆ ಚಾರಣದ ಹೆಸರಿನಲ್ಲಿ ಜನರಿಂದ ಹಣ ವಸೂಲಿ ಮಾಡುತ್ತಿರುವುದು ಎಷ್ಟರಮಟ್ಟಿಗೆ ಸರಿ? ಸಾರ್ವಜನಿಕರಿಂದ ಹಣ ವಸೂಲಿ ಮಾಡಿ ಏನು ಸಾಧನೆ ಮಾಡಬೇಕು. ಈ ಕೂಡಲೇ ಸಂಬಂಧಪಟ್ಟ ಅರಣ್ಯ ಸಚಿವರು ಈ ಆದೇಶವನ್ನು ಹಿಂಪಡೆಯಬೇಕು, ಮುಂದಿನ ದಿನಗಳಲ್ಲಿ ಅರಣ್ಯ ಇಲಾಖೆಯವರು ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವವರಿಂದ ಹಣ ವಸೂಲಿ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ, ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರದ ಶಾಸಕರು ಸಹ ವಿಧಾನಸಭಾ ಅಧಿವೇಶನದಲ್ಲಿ ಚರ್ಚೆ ನಡೆಸಿ ಅರಣ್ಯ ಇಲಾಖೆ ವತಿಯಿಂದ ಹಣ ಪಡೆಯುತ್ತಿರುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು.

ಜಲಾಶಯದಿಂದ ನೀರು ಬಿಡಲು ಶಾಸಕರ ಅನುಮತಿ ಬೇಕೆ?
ರೈತರ ಅನುಕೂಲಕ್ಕಾಗಿ ಉಡುತೊರೆ ಹಳ್ಳ ಜಲಾಶಯ ನಿರ್ಮಾಣ ಮಾಡಲಾಗಿದೆ. ರೈತರ ಬೆಳೆಗಳಿಗೆ ಅವಶ್ಯಕತೆ ಇದ್ದಾಗ ಜಲಾಶಯದಿಂದ ನೀರು ಬಿಡಬೇಕು. ಆದರೆ ಜಲಾಶಯದಿಂದ ನೀರು ಬಿಡಿಸಿಕೊಳ್ಳಲು ಸ್ಥಳೀಯ ಶಾಸಕರ ಅನುಮತಿ ಪಡೆಯಬೇಕೆಂದು ಯಾವ ನಿಯಮದಲ್ಲಿದೆ. ರೈತರು ಬೆಳೆಗಳು ಒಣಗುತ್ತಿದ್ದಾಗ ಜಲಾಶಯದಿಂದ ನೀರು ಬಿಡಬೇಕು ಆದರೆ ಇವರು ಅನುಮತಿ ಪಡೆದು ನೀರು ಬಿಡುವವರೆಗೆ ಬೆಳೆ ಸಂಪೂರ್ಣ ನಿಲಕಚ್ಚಿರುತ್ತದೆ. ಆದ್ದರಿಂದ ರೈತರ ಅನುಕೂಲಕ್ಕೆ ತಕ್ಕಂತೆ ನೀರು ಬಿಡಬೇಕು ಎಂದು ತಾಲೂಕು ಉಪಾಧ್ಯಕ್ಷ ಪಳನಿಸ್ವಾಮಿ ಒತ್ತಾಯಿಸಿದರು.

ಸಭೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಗೌರವಾಧ್ಯಕ್ಷ ರಾಜಣ್ಣ, ಗ್ರಾಮ ಘಟಕಗಳ ಅಧ್ಯಕ್ಷರುಗಳಾದ ಅರ್ಪುದರಾಜ್, ಡೇವಿಡ್ ,ತಂಗವೇಲು, ಮಹಿಳಾ ಘಟಕದ ಅಧ್ಯಕ್ಷೆ ಪೊಂಗೋಡಿ ಸೇರಿದಂತೆ ಇನ್ನಿತರರು ಹಾಜರಿದ್ದರು.

ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ‘ಅರಸು, ಸಿದ್ದರಾಮಯ್ಯ ಎದುರಿಸಿದ ಸವಾಲುಗಳು ವಿಭಿನ್ನ’

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಳೆದ ವಾರ ಒಂದು ವಿಶಿಷ್ಟ ದಾಖಲೆಗೆ ಪಾತ್ರರಾದರು. ಇದುವರೆಗೆ ಕರ್ನಾಟಕವನ್ನು ಸುದೀರ್ಘ…

3 hours ago

ಕೇರಳ ಸರ್ಕಾರ ಭಾಷಾ ಸೌಹಾರ್ದತೆ ಕಾಪಾಡಲಿ

ಏಪ್ರಿಲ್ ತಿಂಗಳ ಹೊತ್ತಿಗೆ ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳದಲ್ಲಿನ, ಸಿಪಿಐ(ಎಂ)ನ ಪಿಣರಾಯಿ ವಿಜಯನ್ ನೇತೃತ್ವದ ಎಲ್‌ಡಿಎ- ಸರ್ಕಾರ, ರಾಜಕೀಯ ಕಾರಣಗಳಿಗಾಗಿ…

3 hours ago

ಮಾವಿನ ತೋಟಗಳನ್ನು ಗುತ್ತಿಗೆಗೆ ಪಡೆಯಲು ಹಿಂದೇಟು

ದೂರ ನಂಜುಂಡಸ್ವಾಮಿ ಕಳೆದ ವರ್ಷ ಉಂಟಾದ ನಷ್ಟದಿಂದ ಉತ್ಸಾಹ ತೋರದ ವ್ಯಾಪಾರಿಗಳು; ರೈತರಲ್ಲಿ ಆತಂಕ  ದೂರ: ತೋಟಗಾರಿಕೆ ಬೆಳೆಗಳಲ್ಲಿ ಒಂದಾದ…

3 hours ago

ಬಿಎಂಸಿಸಿ ರಚನೆ: ಅಭಿವೃದ್ಧಿಗೆ ಹಸಿರು ನಿಶಾನೆ

ಕೆ.ಬಿ.ರಮೇಶನಾಯಕ ಮೈಸೂರು: ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ನಡೆಸಿದ ದೀರ್ಘಾವಧಿ ಆಡಳಿತವನ್ನು ಹಿಂದಿಕ್ಕಿ ದಾಖಲೆ ಬರೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡು…

3 hours ago

137 ವರ್ಷ ದಾಟಿ ಮುನ್ನಡೆದ ಸರ್ಕಾರಿ ಶಾಲೆ!

ಹೇಮಂತ್ ಕುಮಾರ್ ಮಂಡ್ಯ: ಈ ಸರ್ಕಾರಿ ಶಾಲೆಗೆ ೧೩೭ ವರ್ಷ... ವಿದ್ಯಾರ್ಥಿಗಳ ಸಂಖ್ಯೆ ಮಾತ್ರ ೪೧... ಒಂದು ಕಾಲದಲ್ಲಿ ೫೦೦ಕ್ಕೂ…

3 hours ago

ಚಿಕ್ಕಣ್ಣ, ಜಯಪ್ರಕಾಶ್ ಬಿಜೆಪಿಗೆ?

ಮಂಜು ಕೋಟೆ ಕೋಟೆ ರಾಜಕೀಯದಲ್ಲಿ ಹೊಸ ಬದಲಾವಣೆ; ಜಾ.ದಳಕ್ಕೆ ಶಾಕ್ ನೀಡಿದ ಮುಖಂಡರು ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹೊಸ ರಾಜಕೀಯ ಬೆಳವಣಿಗೆಗಳು…

3 hours ago