ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಆಲೋಚನೆ ಮಾಡಲಾಗುತ್ತಿದೆ ಎಂದಿರುವುದರ ವಿರುದ್ಧ ಜಿಲ್ಲೆಯ ರೈತರು ಸೋಮವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ಮಾಡಿದರು.
ರಾಜ್ಯ ರೈತಸಂಘ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಗರ-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ತಾಲ್ಲೂಕಿನ ಮರಿಯಾಲಹುಂಡಿ ಬಳಿ ಪ್ರತಿಭಟನೆ ನಡೆಸಿದರು.
ನಂಜನಗೂಡು -ನೀಲಂಬೂರು ರೈಲ್ವೆ ಹಳಿ ಪ್ರಸ್ತಾಪವನ್ನು ಕೇಂದ್ರ ಸಚಿವರ ಜೊತೆ ಮಾಡಲಾಗಿದ್ದು ರಾತ್ರಿ ಸಂಚಾರ ನಿಷೇಧ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಈ ಹೊಸ ರೈಲು ಯೋಜನೆ ಮೂಲಕ ಮಾಡಲಾಗುವುದು ಎಂದು ಪ್ರಿಯಾಂಕಾ ಅವರು ಹೇಳಿರುವುದು ಕರ್ನಾಟಕದ ಹಿತವನ್ನು ಬಲಿಕೊಡುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು.
ತಮ್ಮ ರಾಜಕೀಯ ಲಾಭಕ್ಕಾಗಿ ಕರ್ನಾಟಕದ ಅದರಲ್ಲೂ ಚಾಮರಾಜನಗರ ಜಿಲ್ಲೆಯ ಪ್ರಕೃತಿಗೆ ಮಾರಕವಾಗಿರುವ ಈ ಪ್ರಸ್ತಾಪ ಮಾಡಿರುವುದು ಪ್ರಿಯಾಂಕವಾದ್ರ ಅವರ ಕರ್ನಾಟಕ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
.
ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡಬಾರದು. ಇದರಿಂದ ಹಗಲು ದರೋಡೆಗೆ ಅನುಮತಿ ಕೊಟ್ಟಂತೆ ಆಗುತ್ತದೆ. ಕಾಡು ಪ್ರಾಣಿಗಳು ಈಗಾಗಲೇ ನಾಡಿಗೆ ಬರುತ್ತಿವೆ. ರಾತ್ರಿ ವಾಹನ ಸಂಚಾರ ನಿಷೇಧ ತೆರವಾದರೆ ಪ್ರಾಣಿಗಳೆಲ್ಲಾ ಬಹುತೇಕ ನಾಡಿನತ್ತ ಬರಲು ಅನುಮತಿ ಸಿಕ್ಕಂತೆ ಆಗುತ್ತದೆ ಎಂದು ಎಚ್ಚರಿಸಿದರು.
ಪ್ರಾಣಿಗಳು ಮತ್ತು ಮಾನವ ಸಂಘರ್ಷವನ್ನು ತಡೆಯುವುದಕ್ಕಾಗಿ ಅವೈಜ್ಞಾನಿಕವಾದಂತಹ ಪ್ರಕೃತಿಗೆ ವಿರುದ್ಧವಾದ ಪ್ರಾಣಿಗಳಿಗೆ ಸಂತಾನ ಹರಣ ಚುಚ್ಚುಮದ್ದು ನೀಡುವ ಪ್ರಸ್ತಾಪವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಡಿದ್ದು ಇದು ಅರಣ್ಯ ಇಲಾಖೆಯ ಬೇಜವಾಬ್ದಾರಿ ತನಕ್ಕೆ ಸಾಕ್ಷಿಯಾಗಿದೆ. ಈ ಪ್ರಸ್ತಾವ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ , ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್ , ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ವಳಗೆರೆ ಗಣೇಶ್ , ಮಲೆಯೂರು ಮಹೇಂದ್ರ , ಪ್ರಕಾಶ್ ಗಾಂಧಿ, ಹೊಸಪುರ ಮಾದಪ್ಪ ,ಅಲಳಿಕಟ್ಟೆ ಪ್ರಭುಸ್ವಾಮಿ, ಮಹದೇವಪ್ಪ, ಶ್ರೀಕಂಠ, ನಾಗು. ಮುದ್ದಳ್ಳಿ ಮಧು, ಚಿದಂಬರ, ಬಸವರಾಜು ಉಮೇಶ್ ,ನಾಗರಾಜಪ್ಪ, ಊರ್ದಳ್ಳಿ ರಾಮಣ್ಣ,ರಾಜು ಪುಟ್ಟಮಲ್ಲೆಗೌಡ, ಪ್ರಭುಸ್ವಾಮಿ. ಗುರುವಿನಪುರ ಮೋಹನ್ ಮೊದಲಾದವರು ಭಾಗವಹಿಸಿದ್ದರು.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…