ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಾಡು ಪ್ರಾಣಿಗಳ ನಿಯಂತ್ರಣಕ್ಕೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ನಡೆಸುವ ಆಲೋಚನೆ ಮಾಡಲಾಗುತ್ತಿದೆ ಎಂದಿರುವುದರ ವಿರುದ್ಧ ಜಿಲ್ಲೆಯ ರೈತರು ಸೋಮವಾರ ಹೆದ್ದಾರಿ ಸಂಚಾರ ತಡೆ ಮಾಡಿ ಪ್ರತಿಭಟನೆ ಮಾಡಿದರು.
ರಾಜ್ಯ ರೈತಸಂಘ ಸಂಘಟನೆಗಳ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರರ ಸಂಘದ ನೇತೃತ್ವದಲ್ಲಿ ನಗರ-ನಂಜನಗೂಡು ಮುಖ್ಯ ರಸ್ತೆಯಲ್ಲಿರುವ ತಾಲ್ಲೂಕಿನ ಮರಿಯಾಲಹುಂಡಿ ಬಳಿ ಪ್ರತಿಭಟನೆ ನಡೆಸಿದರು.
ನಂಜನಗೂಡು -ನೀಲಂಬೂರು ರೈಲ್ವೆ ಹಳಿ ಪ್ರಸ್ತಾಪವನ್ನು ಕೇಂದ್ರ ಸಚಿವರ ಜೊತೆ ಮಾಡಲಾಗಿದ್ದು ರಾತ್ರಿ ಸಂಚಾರ ನಿಷೇಧ ಸಮಸ್ಯೆಯನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನವನ್ನು ಈ ಹೊಸ ರೈಲು ಯೋಜನೆ ಮೂಲಕ ಮಾಡಲಾಗುವುದು ಎಂದು ಪ್ರಿಯಾಂಕಾ ಅವರು ಹೇಳಿರುವುದು ಕರ್ನಾಟಕದ ಹಿತವನ್ನು ಬಲಿಕೊಡುವ ಪ್ರಯತ್ನವಾಗಿದೆ ಎಂದು ಕಿಡಿಕಾರಿದರು.
ತಮ್ಮ ರಾಜಕೀಯ ಲಾಭಕ್ಕಾಗಿ ಕರ್ನಾಟಕದ ಅದರಲ್ಲೂ ಚಾಮರಾಜನಗರ ಜಿಲ್ಲೆಯ ಪ್ರಕೃತಿಗೆ ಮಾರಕವಾಗಿರುವ ಈ ಪ್ರಸ್ತಾಪ ಮಾಡಿರುವುದು ಪ್ರಿಯಾಂಕವಾದ್ರ ಅವರ ಕರ್ನಾಟಕ ವಿರೋಧಿ ನೀತಿಯನ್ನು ತೋರಿಸುತ್ತದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
.
ಕೇಂದ್ರ ಸರ್ಕಾರ ಯಾವುದೇ ಕಾರಣಕ್ಕೂ ಇದಕ್ಕೆ ಅವಕಾಶ ಕೊಡಬಾರದು. ಇದರಿಂದ ಹಗಲು ದರೋಡೆಗೆ ಅನುಮತಿ ಕೊಟ್ಟಂತೆ ಆಗುತ್ತದೆ. ಕಾಡು ಪ್ರಾಣಿಗಳು ಈಗಾಗಲೇ ನಾಡಿಗೆ ಬರುತ್ತಿವೆ. ರಾತ್ರಿ ವಾಹನ ಸಂಚಾರ ನಿಷೇಧ ತೆರವಾದರೆ ಪ್ರಾಣಿಗಳೆಲ್ಲಾ ಬಹುತೇಕ ನಾಡಿನತ್ತ ಬರಲು ಅನುಮತಿ ಸಿಕ್ಕಂತೆ ಆಗುತ್ತದೆ ಎಂದು ಎಚ್ಚರಿಸಿದರು.
ಪ್ರಾಣಿಗಳು ಮತ್ತು ಮಾನವ ಸಂಘರ್ಷವನ್ನು ತಡೆಯುವುದಕ್ಕಾಗಿ ಅವೈಜ್ಞಾನಿಕವಾದಂತಹ ಪ್ರಕೃತಿಗೆ ವಿರುದ್ಧವಾದ ಪ್ರಾಣಿಗಳಿಗೆ ಸಂತಾನ ಹರಣ ಚುಚ್ಚುಮದ್ದು ನೀಡುವ ಪ್ರಸ್ತಾಪವನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ ಮಾಡಿದ್ದು ಇದು ಅರಣ್ಯ ಇಲಾಖೆಯ ಬೇಜವಾಬ್ದಾರಿ ತನಕ್ಕೆ ಸಾಕ್ಷಿಯಾಗಿದೆ. ಈ ಪ್ರಸ್ತಾವ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ , ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್ , ರಾಜ್ಯ ಖಜಾಂಚಿ ಕೆರೆಹುಂಡಿ ರಾಜಣ್ಣ, ವಳಗೆರೆ ಗಣೇಶ್ , ಮಲೆಯೂರು ಮಹೇಂದ್ರ , ಪ್ರಕಾಶ್ ಗಾಂಧಿ, ಹೊಸಪುರ ಮಾದಪ್ಪ ,ಅಲಳಿಕಟ್ಟೆ ಪ್ರಭುಸ್ವಾಮಿ, ಮಹದೇವಪ್ಪ, ಶ್ರೀಕಂಠ, ನಾಗು. ಮುದ್ದಳ್ಳಿ ಮಧು, ಚಿದಂಬರ, ಬಸವರಾಜು ಉಮೇಶ್ ,ನಾಗರಾಜಪ್ಪ, ಊರ್ದಳ್ಳಿ ರಾಮಣ್ಣ,ರಾಜು ಪುಟ್ಟಮಲ್ಲೆಗೌಡ, ಪ್ರಭುಸ್ವಾಮಿ. ಗುರುವಿನಪುರ ಮೋಹನ್ ಮೊದಲಾದವರು ಭಾಗವಹಿಸಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…