ಚಾಮರಾಜನಗರ

ಹನೂರು| ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆದಿವಾಸಿ ಸಮುದಾಯದಿಂದ ಪ್ರತಿಭಟನೆ: ಕಾರಣ ಇಷ್ಟೇ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು 

ಹನೂರು: ಗುಂಡ್ಲುಪೇಟೆ ತಾಲೂಕಿನ ನಂಜದೇವನಪುರ ಗ್ರಾಮ ಸುತ್ತಮುತ್ತಲು ಬೀಡುಬಿಟ್ಟಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಗೆ ತಂದು ಬಿಡುತ್ತಿದ್ದಾರೆ ಎಂದು ಆರೋಪಿಸಿ ಕೆರೆದಿಂಬ ಗೊಂಬೆಗಲ್ಲು ಗ್ರಾಮದ ಆದಿವಾಸಿ ಸಮುದಾಯದವರು ಪ್ರತಿಭಟನೆ ನಡೆಸಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತ ವಿಭಾಗ ವ್ಯಾಪ್ತಿಯ ಚಾಮರಾಜನಗರ ತಾಲ್ಲೂಕಿನ ಹರವೆ ಹೋಬಳಿಯ ನಂಜದೇವನಪುರ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಒಂದು ತಾಯಿ ಹುಲಿ ಹಾಗೂ ನಾಲ್ಕು ಉಳಿ ಮರಿಗಳು ರೈತನ ಜಮೀನಿನಲ್ಲಿ ಕಾಣಿಸಿಕೊಂಡಿದ್ದವು. ಇದರಿಂದ ಆತಂಕಗೊಂಡಿದ್ದ ರೈತರು 5 ಹುಲಿಗಳನ್ನು ಹಿಡಿದು ಸ್ಥಳಾಂತರ ಮಾಡುವಂತೆ ಪ್ರತಿಭಟನೆ ನಡೆಸಿದ್ದರು.

ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸಹ ಹುಲಿ ಸೆರೆಹಿಡಿಯುವ ಬಗ್ಗೆ ಸೂಚನೆ ನೀಡಿದ್ದರು.

ಅದರಂತೆ ಅರಣ್ಯ ಇಲಾಖೆಯವರು ವಿಶೇಷ ಕಾರ್ಯಾಚರಣೆಯ ಮೂಲಕ ಜನವರಿ 9ರಂದು ತಾಯಿಹುಲಿಯನ್ನು ಸೆರೆಹಿಡಿದಿದ್ದರು. ಉಳಿದಂತೆ ಜನವರಿ 15 ಹಾಗೂ 17ರಂದು ಒಂದು ಹೆಣ್ಣು ಹುಲಿಮರಿ ಒಂದು ಗಂಡು ಹುಲಿಮರಿಯನ್ನು ಸೆರೆ ಹಿಡಿದಿದ್ದರು. ಇನ್ನು ಎರಡು ಹುಲಿ ಮರಿಗಳು ಇದ್ದು, ಇವುಗಳನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಮುಂದುವರಿಸಿದ್ದರು.

ಈ ನಡುವೆ ಸೆರೆ ಹಿಡಿದಿದ್ದ ಎರಡು ಹುಲಿ ಮರಿಗಳನ್ನು ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡ ಸಂಪಿಗೆ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಬೋನು ಇಟ್ಟಿದ್ದರು.

ಇದನ್ನು ಗಮನಿಸಿದ ಆದಿವಾಸಿ ಸಮುದಾಯದವರು ಬೇರೆ ಕಡೆಯಿಂದ ನಮ್ಮ ಭಾಗಕ್ಕೆ ಹುಲಿ ತಂದು ಬಿಡುವುದರಿಂದ ಅರಣ್ಯದ ಒಳಗೆ ವಾಸಿಸುವ ನಮಗೆ ತೊಂದರೆಯಾಗುತ್ತದೆ. ಈ ಕೂಡಲೇ ಈ ಹುಲಿಯನ್ನು ಬೇರೆ ಸ್ಥಳಾಂತರಿಸಬೇಕು ಇಲ್ಲದಿದ್ದರೆ ಉಗ್ರ ಪ್ರತಿಭಟನೆ ಮಾಡುವುದಾಗಿ ಅರಣ್ಯ ಇಲಾಖೆ ಕಚೇರಿ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದಾರೆ.

ಇನ್ನು ಮಾಧ್ಯಮದವರೊಂದಿಗೆ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ವಿಭಾಗದ ಪ್ರಭಾರ ಡಿಸಿಎಫ್ ಭಾಸ್ಕರ್ ಮಾತನಾಡಿ, ನಂಜದೇವನಪುರ ಸುತ್ತಮುತ್ತಲು ಹೋರಾಡುತ್ತಿದ್ದ ಹುಲಿಗಳ ಪೈಕಿ 2 ಹುಲಿ ಮರಿಗಳನ್ನು ಸಂರಕ್ಷಣೆ ಮಾಡಲಾಗುತ್ತಿದೆ. ಇನ್ನು ಪತ್ತೆಯಾಗದ ಎರಡು ಹುಲಿ ಮರಿಗಳನ್ನು ಸೆರೆಹಿಡಿದು ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಬೇರೆಡೆಗೆ ಸ್ಥಳಾಂತರ ಮಾಡಲಾಗುವುದು. ಹುಲಿ ಮರಿಗಳಾಗಿರುವುದರಿಂದ ನೇರವಾಗಿ ಇದನ್ನು ಅರಣ್ಯಕ್ಕೆ ಬಿಡಲು ಸಾಧ್ಯವಿಲ್ಲ. ಹುಲಿ ಮರಿಗಳ ಸಂರಕ್ಷಣೆಗಾಗಿ ಫೋನಿನಲ್ಲಿ ಇಡಲಾಗಿದೆ ಎಂದು ಆಂದೋಲನದೊಂದಿಗೆ ಸ್ಪಷ್ಟಪಡಿಸಿದರು.

 

ಆಂದೋಲನ ಡೆಸ್ಕ್

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

9 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago