Protest demanding drinking water
ಹನೂರು : ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ಒತ್ತಾಯಿಸಿ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ ವಿಲೇಜ್ ನ ಗ್ರಾಮಸ್ಥರು ಮಾತನಾಡಿ ನಮ್ಮ ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಸಮರ್ಪಕ ಕುಡಿಯುವ ನೀರು ಇಲ್ಲದೇ ಇರುವುದರಿಂದ ಶೌಚಾಲಯಕ್ಕೆ ಹೋಗಲು ತೊಂದರೆಯಾಗುತ್ತಿದೆ. ಮೂರು ನಾಲ್ಕು ದಿನಗಳಿಗೊಮ್ಮ ಸ್ನಾನ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸಮರ್ಪಕ ಮಳೆ ಇಲ್ಲದೆ ಕೂಲಿಯೂ ಸಹ ಇಲ್ಲ ಇರುವಂತಹ ಕೂಲಿ ಕೆಲಸವನ್ನು ಬಿಟ್ಟು ಕುಡಿಯವ ನೀರು ಹಿಡಿಯಲು ಕಷ್ಟ ಪಡುತ್ತಿದ್ದೇವೆ. ಕುಡಿಯುವ ನೀರು ಪೂರೈಕೆ ಮಾಡುವಂತೆ ಪಿಡಿಒ ರಂಗರಾಜುರವರಿಗೆ ಹಲವಾರು ಬಾರಿ ಮನವಿ ನೀಡಿದ್ದರು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಅವರು ಪಂಚಾಯಿತಿಗೆ ಸರಿಯಾಗಿ ಬರುತ್ತಿಲ್ಲ ಇವರನ್ನು ಮೊದಲು ಬೇರೆ ಕಡೆಗೆ ವರ್ಗಾವಣೆ ಮಾಡಿ ನಮ್ಮ ಗ್ರಾಮಕ್ಕೆ ಒಳ್ಳೆಯ ಅಧಿಕಾರಿಗಳನ್ನು ನೇಮಕ ಮಾಡುವಂತೆ ಒತ್ತಾಯಿಸಿದರು.
ಇನ್ನು ಒಂದು ದಿನ ಒಳಗೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದಿದ್ದರೆ ಚಾಮರಾಜನಗರ ಜಿಲ್ಲಾ ಆಡಳಿತದ ಕಚೇರಿ ಮುಂಭಾಗ ಪ್ರತಿಭಟನೆ ಮಾಡುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
ಗ್ರಾಮದ ನಿವಾಸಿ ಸೆಲ್ವಿ ಮಾತನಾಡಿ ನಮ್ಮ ಶ್ರೀ ವಿಲೇಜ್ ನಲ್ಲಿ ನೂರಕ್ಕೂ ಹೆಚ್ಚು ಕುಟುಂಬಗಳಿದ್ದು ಕಳೆದ ಎರಡು ತಿಂಗಳಿನಿಂದ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡದೆ ಇರುವುದರಿಂದ ತೊಂದರೆಯಾಗುತ್ತಿದೆ. ಮಳೆ ಇಲ್ಲದೆ ಇರುವುದರಿಂದ ಜಮೀನುಗಳಲ್ಲಿಯೂ ಸಹ ನೀರು ಕೊಡುತ್ತಿಲ್ಲ ಪ್ರತಿದಿನ ಒಬ್ಬರಿಗೆ ಮೂರು ಬಿಂದಿಗೆ ನೀರು ಕೊಡುತ್ತಾರೆ, ಗ್ರಾಮದವರು ಎಲ್ಲರೂ ಒಂದೇ ತೋಟಕ್ಕೆ ನೀರಿಗಾಗಿ ಹೋದರೆ ಅವರು ತಾನೇ ಏನು ಮಾಡಲು ಸಾಧ್ಯ, ಕೆಲವು ದಿನಗಳ ಕಾಲ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡುತ್ತಿದ್ದರು. ಇದೀಗ ಟ್ಯಾಂಕರ್ ನಲ್ಲಿಯೂ ನೀರು ಕೊಡುತ್ತಿಲ್ಲ,ಹ್ಯಾಂಡ್ ಪಂಪ್ ನಲ್ಲಿ ನೀರು ಬರುತ್ತಿದ್ದರು ನೀರಿನಲ್ಲಿ ಮಣ್ಣಿನ ಅಂಶ ಹೆಚ್ಚಾಗಿರುವುದರಿಂದ ಇದನ್ನು ಬಳಕೆ ಮಾಡಲು ಸಾಧ್ಯವಾಗುತ್ತಿಲ್ಲ, ಆದ್ದರಿಂದ ಸಂಬಂಧಪಟ್ಟ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಶುದ್ಧ ಕುಡಿಯುವ ನೀರು ಪೂರೈಕೆ ಮಾಡಬೇಕು ಇಲ್ಲದಿದ್ದರೆ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಆಕ್ರೋಶ ಹೂರಹಾಕಿದರು.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…