chamaraja nagara
ಚಾಮರಾಜನಗರ : ನ್ಯಾ.ಎಚ್.ಎನ್. ನಾಗಮೋಹನ್ದಾಸ್ ಅವರ ಆಯೋಗ ಸಲ್ಲಿಸಿರುವ ಒಳಮೀಸಲಾತಿ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು ಎಂದು ಆಗ್ರಹಿಸಿ ದಲಿತ ಬಲಗೈ ಸಮುದಾಯದವರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.
ಇಲ್ಲಿನ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು, ಆಯೋಗದ ಅಧ್ಯಕ್ಷರಾದ ನಾಗಮೋಹನ್ ದಾಸ್ ವಿರುದ್ದ ಘೋಷಣೆ ಕೂಗಿ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶೇಷ ಸಚಿವ ಸಂಪುಟ ಸಭೆ ಕರೆದು ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಸಲ್ಲಿಸಿರುವ ಸಮೀಕ್ಷಾ ವರದಿಯನ್ನು ಪುನರ್ ಪರಿಶೀಲಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಲಿತ ಮಹಾಸಭಾ ರಾಜ್ಯ ಉಪಾಧ್ಯಕ್ಷ ವೆಂಕಟರಮಣಸ್ವಾಮಿ( ಪಾಪು) ಮಾತನಾಡಿ, ಪರಿಶಿಷ್ಟ ಜಾತಿಯ ಒಳಮೀಸಲಾತಿ ವರದಿ ಅವೈಜ್ಞಾನಿಕವಾಗಿದ್ದು ಬಲಗೈ ಸಮುದಾಯಕ್ಕೆ ತುಂಬಾ ಅನ್ಯಾಯವಾಗುತ್ತದೆ. ಆದ್ದರಿಂದ ಬಲಗೈ ಸಮುದಾಯಕ್ಕೆ ಮರಣ ಶಾಸನವಾಗಿರುವ ಈ ವರದಿ ಜಾರಿ ಮಾಡದೇ ತಿರಸ್ಕರಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಪಂ ಮಾಜಿ ಸದಸ್ಯ ಅಯ್ಯನಪುರ ಶಿವಕುಮಾರ್, ಮುಖಂಡರಾದ ಸಿ.ಎಂ.ಶಿವಣ್ಣ, ಆಲೂರು ನಾಗೇಂದ್ರ, ನಾಗಯ್ಯ, ವಕೀಲ ದಲಿತರಾಜ್, ಆಟೋ ಉಮೇಶ್, ನಾಗೇಶ್, ಶಿವಣ್ಣ, ಮೊದಲಾದವರು ಭಾಗವಹಿಸಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…