ಗುಂಡ್ಲುಪೇಟೆ: ಕೆಲಸದ ಒತ್ತಡದಿಂದ ಅರಣ್ಯ ಇಲಾಖೆ ದಿನಗೂಲಿ ನೌಕರ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಕಚೇರಿ ಮುಂದೆಯೇ ಶವವಿಟ್ಟು ಪ್ರತಿಭಟನೆ ನಡೆಸಿರುವ ಘಟನೆ ಗುಂಡ್ಲುಪೇಟೆ ಪಟ್ಟಣದಲ್ಲಿ ನಡೆದಿದೆ.
ತಾಲ್ಲೂಕಿನ ಗೋಪಾಲಪುರ ಗ್ರಾಮದ ಮಹೇಶ್ಗೆ (53 ) ಬ್ರೈನ್ ಸ್ಟ್ರೋಕ್ ಸಂಭವಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಅಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟ ಹಿನ್ನೆಲೆಯಲ್ಲಿ ಮೃತ ಮಹೇಶ್ ಕುಟುಂಬಸ್ಥರು ಹಾಗೂ ಗೋಪಾಲಪುರ ಗ್ರಾಮಸ್ಥರು ಮೃತ ಮಹೇಶ್ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಹಾಗೂ ಕುಟುಂಬದ ಒಬ್ಬರಿಗೆ ಉದ್ಯೋಗ ನೀಡುವಂತೆ ಪ್ರತಿಭಟನೆ ನಡೆಸಿದರು.
ಮೃತ ಮಹೇಶ್ ಬಂಡೀಪುರ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರನಾಗಿ ಕಳೆದ 28 ವರ್ಷಗಳಿಂದ ಕೆಲಸ ನಿರ್ವಹಿಸುತಿದ್ದರು. ಮೃತನಿಗೆ ಪತ್ನಿ, ಒಬ್ಬ ಹೆಣ್ಣು ಮಗಳಿದ್ದು ಕುಟುಂಬ ಆರ್ಥಿಕ ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯಿಂದ ಸೂಕ್ತ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ನೌಕರಿ ನಿಡುವಂತೆ ಮದ್ದೂರು ಚೆಕ್ ಪೋಸ್ಟ್ ಬಳಿ ಮೃತ ಮಹೇಶ್ ಶವವಿಟ್ಟು ಪ್ರತಿಭಟನೆ ನಡೆಸುತ್ತಿದ್ದಾರೆ.
ಪ್ರತಿಭಟನೆಯಲ್ಲಿ 28 ವರ್ಷ ದಿನಗೂಲಿ ನೌಕರನಾಗಿದ್ದರೂ ನೌಕರಿ ಖಾಯಂ ಮಾಡಿಲ್ಲ. ಮೃತರಿಗೆ ಪರಿಹಾರ ಕೊಡಲು ಬರುವುದಿಲ್ಲ ಹಾಗೂ ಪಿಎಫ್ ಇಲ್ಲ ಎಂದರೆ ಕುಟುಂಬದವರು ಹೇಗೆ ಬದುಕುವುದು ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದು, ಪರಿಹಾರ ಹಾಗೂ ಕೆಲಸ ಕೊಡುವವರೆಗೂ ಪ್ರತಿಭಟನೆ ಮುಂದುವರೆಸುವ ಎಚ್ಚರಿಕೆ ನೀಡಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…