ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು
ಹನೂರು: ಷೇರುದಾರರು ನಿಮ್ಮ ಮೇಲೆ ವಿಶ್ವಾಸವಿಟ್ಟು ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ ನೀವು ಅವರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಿರಂಜನ್ ಕುಮಾರ್ ತಿಳಿಸಿದರು.
ಚಾಮರಾಜನಗರದ ಭಾರತೀಯ ಜನತಾ ಪಾರ್ಟಿ ಕಚೇರಿಯಲ್ಲಿ ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಜಯಗಳಿಸಿದ ಮೈತ್ರಿ ಪಕ್ಷದ ನಿರ್ದೇಶಕರುಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.
ಹನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರಾದ ವೆಂಕಟೇಶ್ ರವರು ಹನೂರು ಕ್ಷೇತ್ರದಲ್ಲಿ ಓಡಾಟ ನಡೆಸಿ ಪಕ್ಷ ಸಂಘಟನೆ ಮಾಡಿ ಕಾರ್ಯಕರ್ತರನ್ನು ಪ್ರಬಲವಾಗಿ ಸಂಘಟಿತರನ್ನಾಗಿ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಸಂಘವು ಲಾಭದಲ್ಲಿ ಇದೆಯೋ ನಷ್ಟದಲ್ಲಿ ಇದಿಯೋ ಎಂಬುದನ್ನು ಆಗಾಗ ಪರಿಶೀಲನೆ ಮಾಡಬೇಕು. ಸರ್ಕಾರದಿಂದ ಸಿಗುವ ಸೌಲಭ್ಯವನ್ನು ಪ್ರತಿಯೊಬ್ಬ ರೈತರಿಗೂ ದೊರಕಿಸಿ ಕೊಟ್ಟು ರೈತರಿಗೆ ಬೆಂಬಲವಾಗಿರಬೇಕು ಎಂದು ಸಲಹೆ ನೀಡಿದರು.
ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಜನದ್ವನಿ ವೆಂಕಟೇಶ್ ಮಾತನಾಡಿ, ಹೂಗ್ಯಂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 12 ನಿರ್ದೇಶಕರಿಗೆ ನಡೆದ ಚುನಾವಣೆಯಲ್ಲಿ ಮೈತ್ರಿ ಪಕ್ಷದ ಎಂಟು ಜನ ಅಭ್ಯರ್ಥಿಗಳನ್ನು ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿರ್ದೇಶಕರು ಅಧ್ಯಕ್ಷರು ಕಳೆದ ಹಲವಾರು ವರ್ಷಗಳಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದಲ್ಲಿ ಸಿಗುವ ಸೌಲಭ್ಯಗಳನ್ನು ಸಮರ್ಪಕವಾಗಿ ದೊರಕಿಸಿಕೊಡದೆ ಇರುವುದರಿಂದ ಅವರನ್ನು ವಿಶ್ರಾಂತಿಗೆ ಕಳುಹಿಸಿದ್ದಾರೆ ಎಂದು ಶುಭ ಕೋರಿ ನೂತನ ಸದಸ್ಯರುಗಳನ್ನು ಗೌರವಿಸಿದರು.
ನೂತನ ನಿರ್ದೇಶಕರುಗಳಾದ ಸುಬ್ಬಮ್ಮ, ಚಂದ್ರಮ್ಮ, ಭದ್ರಯ್ಯ, ನಾಗರಾಜು ಕೆ, ತಂಗವೇಲು P G, ಕೃಷ್ಣ, ಕೃಷ್ಣಶೆಟ್ಟಿ, ಚಿನ್ನತಮ್ಮಭೋವಿರವರನ್ನು ಸನ್ಮಾನಿಸಲಾಯಿತು.
ಪ್ರಶಿಕ್ಷಣ ವಿಭಾಗ ಸಂಚಾಲಕರಾದ ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಪ್ರೊಫೆಸರ್ ಮಲ್ಲಿಕಾರ್ಜುನಪ್ಪ, ಹನೂರು ವಿಧಾನಸಭಾ ಕ್ಷೇತ್ರ ಉಸ್ತುವಾರಿಗಳಾದ ವೆಂಕಟೇಶ್, ನೂರೊಂದು ಶೆಟ್ಟಿ, ರಾಮಚಂದ್ರ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೊನ್ನೂರ್ ಮಹದೇವಸ್ವಾಮಿ, ಮೂಡ್ನಾಕೂಡು ಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…