Mysore
27
overcast clouds

Social Media

ಮಂಗಳವಾರ, 23 ಜೂನ್ 2026
Light
Dark

ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!