ಚಾಮರಾಜನಗರ

ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

lokesh

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

6 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

8 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

8 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

9 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

10 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

10 hours ago