ಚಾಮರಾಜನಗರ

ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

lokesh

Recent Posts

ಹೃದಯಾಘಾತದಿಂದ ಹಿರಿಯ ಪತ್ರಕರ್ತ ದೊಡ್ಡ ಬೊಮಯ್ಯ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಹಿರಿಯ ಪತ್ರಕರ್ತ, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡ ಬೊಮಯ್ಯ ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಸಿಎಂ ಸಿದ್ದರಾಮಯ್ಯ…

22 mins ago

ನಾಲ್ವರ ಹತ್ಯೆಗೈದ ಅಪರಾಧಿಗೆ ಗಲ್ಲು ಶಿಕ್ಷೆ: ತನಿಖೆಯಲ್ಲಿ ಪಾಲ್ಗೊಂಡ ಅಧಿಕಾರಿ, ಸಿಬ್ಬಂದಿಗೆ ಬೆಳ್ಳಿ ಪದಕದ ಗೌರವ

ಮಡಿಕೇರಿ: ಮಾರ್ಚ್‌ನಲ್ಲಿ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲಲಿ ನಡೆದಿದ್ದ ನಾಲ್ವರ ಹತ್ಯೆ ಪ್ರಕರಣ ಸಂಬಂಧ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿ…

28 mins ago

ಮಾಗಿ ಉತ್ಸವದ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ ಹಂತದ ಸಿದ್ಧತೆ

ಮೈಸೂರು: ಮೈಸೂರಿನ ಅರಮನೆ ಆವರಣದಲ್ಲಿ ಡಿಸೆಂಬರ್.21ರಿಂದ 31ರವರೆಗೆ ಜರುಗಲಿರುವ ಪ್ರತಿಷ್ಠಿತ ಮಾಗಿ ಉತ್ಸವದ ಅಂಗವಾಗಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನಕ್ಕೆ ಅಂತಿಮ…

33 mins ago

ಖ್ಯಾತ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನ

ಕೊಚ್ಚಿ: ಖ್ಯಾತ ಮಲಯಾಳಂ ನಟ ಹಾಗೂ ನಿರ್ದೇಶಕ ಶ್ರೀನಿವಾಸ್‌ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ವಿವಿಧ…

36 mins ago

ಚಾಮರಾಜನಗರ| ಒಟ್ಟಿಗೆ ಕಾಣಿಸಿಕೊಂಡ ಐದು ಹುಲಿಗಳು: ಭಯಭೀತರಾದ ಗ್ರಾಮಸ್ಥರು

ಚಾಮರಾಜನಗರ: ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲ್ಲೂಕುಗಳ ಗ್ರಾಮಸ್ಥರಲ್ಲಿ ವ್ಯಾಘ್ರಗಳ ಆತಂಕ ಮನೆ ಮಾಡಿದೆ. ಒಟ್ಟಿಗೆ ಐದು ಹುಲಿಗಳು ರಸ್ತೆಯಲ್ಲಿ ಹಾದು…

2 hours ago

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ದೊಡ್ಡಳ್ಳಿ ಗ್ರಾಮದ ಸುಧಾಮಣಿ ಹಾಗೂ…

2 hours ago