ಚಾಮರಾಜನಗರ

ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ

ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್​ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.

ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

lokesh

Recent Posts

ದಂಡ ರಿಯಾಯಿತಿ: ನಿಯಮ ಉಲ್ಲಂಘನೆಗೆ ಸ್ಛೂರ್ತಿ?

‘ಸಂಚಾರ ನಿಯಂತ್ರಣ ಪೊಲೀಸರ ಆದ್ಯ ಕರ್ತವ್ಯ ಆಗಲಿ’  ಪಿ.ಜೆ.ರಾಘವೇಂದ್ರ, ನ್ಯಾಯವಾದಿ, ಮೈಸೂರು ಬೆಂಗಳೂರಿನ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರ…

21 mins ago

ಮಳೆ ಕ್ಷೀಣ; ಕುಸಿದ ಹಾರಂಗಿ ಒಳಹರಿವು

ಕೆ.ಬಿ.ಶಂಶುದ್ಧೀನ್ ನಿರೀಕ್ಷಿತ ಪ್ರಮಾಣದಲ್ಲಿ ಬೀಳದ ಮಳೆ; ರೈತರಲ್ಲಿ ಹೆಚ್ಚಿದ ಆತಂಕ ಕುಶಾಲನಗರ: ಮುಂಗಾರು ಮಳೆ ಕೊರತೆಯಿಂದ ಕೊಡಗು ಜಿಲ್ಲೆಯ ಹಾರಂಗಿ…

24 mins ago

ನಕ್ಕುಂದಿ ಗ್ರಾಮದಲ್ಲಿ ಕುಡಿಯುವ ನೀರಿಗೆ ತತ್ವಾರ

ಹಳ್ಳದ ನೀರನ್ನೇ ಸೇವಿಸುತ್ತಿರುವ ನಿವಾಸಿಗಳು; ಅಧಿಕಾರಿಗಳು, ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ಹನೂರು: ತಾಲ್ಲೂಕಿನ ಕಾಡಂಚಿನ ಮೀಣ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

30 mins ago

ಶಿಕ್ಷಕರಿಗೆ ಪಠ್ಯಪುಸ್ತಕ ಸಾಗಣೆ ಹೊರೆ?

ಬೋಧಿಸಬೇಕೆಂದರೆ  ಪುಸ್ತಕ ಕೊಂಡೊಯ್ಯುವ ಅನಿವಾರ್ಯತೆ ಮೈಸೂರು: ರಾಜ್ಯದ ಸರ್ಕಾರಿ ಶಾಲೆಗಳ ಆರಂಭದಿಂದಲೇ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಿಸಲಾಗುತ್ತಿದೆ. ಪ್ರತಿವರ್ಷ ಸಾಮಾನ್ಯವಾಗಿ…

33 mins ago

ಉತ್ತರ ಪ್ರದೇಶ: ಕಟ್ಟಡದಲ್ಲಿ ಅಗ್ನಿ ಅವಘಡ: 15 ವಿದ್ಯಾರ್ಥಿಗಳು ಸಾವು

ಲಖನೌ: ಉತ್ತರ ಪ್ರದೇಶದ ಅಲಿಗಂಜ್‌ನಲ್ಲಿರುವ ಮೂರು ಅಂತಸ್ತಿನ ವಾಣಿಜ್ಯ ಕಟ್ಟಡವೊಂದರಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿದ್ದು, ಕನಿಷ್ಠ 15 ವಿದ್ಯಾರ್ಥಿಗಳು…

12 hours ago