ಚಾಮರಾಜನಗರ : ಗಡಿನಾಡು ಚಾಮರಾಜನಗರ ಅತಿ ಹೆಚ್ಚು ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಚಾಮರಾಜನಗರ ಸುತ್ತ ಮುತ್ತ ಬಂಡಿಪುರ, ಬಿಆರ್ಟಿ ಹಾಗೂ ಮಲೆಮಹದೇಶ್ವರ ಬೆಟ್ಟವಿದ್ದು ಕೇರಳ ಹಾಗೂ ತಮಿಳುನಾಡಿನ ಗಡಿ ಭಾಗವನ್ನು ಹಂಚಿಕೊಂಡಿದೆ. ರಾಜ್ಯದಲ್ಲಿ ಅತಿ ಹೆಚ್ಚು ಆನೆ ಹಾಗೂ ಚಿರತೆ ಹೊಂದಿರುವ ಜಿಲ್ಲೆಯೆಂಬ ಖ್ಯಾತಿ ಕೂಡ ಚಾಮರಾಜನಗರಕ್ಕಿದೆ. ಕಳೆದ ಮೂರ್ನಾಲ್ಕು ತಿಂಗಳಿನಿಂದ ಒಂಟಿ ಸಲಗವೊಂದು ಪದೇ ಪದೇ ಜಮೀನುಗಳಿಗೆ ನುಗ್ಗಿ ಬೆಳೆದ ಬೆಳೆಗಳನ್ನ ತಿಂದು ತೇಗುತ್ತಿತ್ತು. ಸದ್ಯ ಈಗ ಕೂಂಬಿಂಗ್ ಕಿಂಗ್ ಬಲರಾಮ ನೇತೃತ್ವದ ತಂಡ ಯಶಸ್ವಿ ಕಾರ್ಯಾಚರಣೆ ನಡೆಸಿ ಕಾಡಂಚಿನ ಜನರಿಗೆ ಉಪಟಳ ನೀಡ್ತಿದ್ದ ಪುಂಡಾನೆಯನ್ನು ಸೆರೆ ಹಿಡಿದಿದೆ.
ಒಂಟಿ ಕಾಡಾನೆ ಬೆಳೆ ನಾಶ ಮಾಡುತ್ತಿದ್ದ ಹಿನ್ನಲೆ ಪುಂಡಾನೆಯನ್ನು ಸೆರೆ ಹಿಡಿದು ನಮ್ಮ ಬೆಳೆಗಳನ್ನು ರಕ್ಷಿಸಿ ಎಂದು ರೈತರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದರು. ಅದೇ ರೀತಿ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಪೂನ್ನಾಚಿಯಲ್ಲಿ ನಿನ್ನೆ ಅರಣ್ಯಾಧಿಕಾರಿಗಳು ಕೂಂಬಿಂಗ್ ಎಕ್ಸ್ಪರ್ಟ್ ಬಲರಾಮ ನೇತೃತ್ವದ 6 ಸಾಕಾನೆಗಳೊಂದಿಗೆ ಕೂಂಬಿಂಗ್ ಕಾರ್ಯಚರಣೆ ಆರಂಭಿಸಿ ನಿನ್ನೆ ರಾತ್ರಿ 9.30 ರ ವೇಳೆಗೆ ಕೂನೆಗೂ ಪುಂಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಪಶು ವೈದ್ಯಾಧಿಕಾರಿ ರಮೇಶ್ ಕಾಡಾನೆಗೆ ಮತ್ತು ಬರುವ ಅರವಳಿಕೆಯನ್ನು ನೀಡುವ ಮೂಲಕ ಸೆರೆ ಹಿಡಿಯಲಾಗಿದೆ. ಹೀಗೆ ಸೆರೆ ಹಿಡಿದ ಕಾಡಾನೆಯನ್ನ ಮಲೆಹದೇಶ್ವರ ವನ್ಯಧಾಮದ ಆನೆ ಬಿಡಾರದಲ್ಲಿ 3 ತಿಂಗಳುಗಳ ಕಾಲ ಪ್ರತ್ಯೇಕವಾಗಿಟ್ಟು ಬಳಿಕ ತರಬೇತಿ ನೀಡಲಾಗುತ್ತೆ. ಸದ್ಯ ಪುಂಡಾನೆ ಸೆರೆ ಹಿಡಿದ ಪರಿಣಾಮ ಕಾಡಂಚಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…