Mysore
30
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ಲೋಕಾಯುಕ್ತ ಬಲೆಗೆ ಬಿದ್ದ ಪಿಡಬ್ಲ್ಯುಡಿ ಇಂಜಿನಿಯರ್ ಗಳು

ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್‌ನ ಸುನೀಲ್‌ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 

ಶುಕ್ರವಾರ ಸಂಜೆ ಇಂಜಿನಿಯರ್ ಗಳಿಬ್ಬರು ಕಾಮಗಾರಿ ವೀಕ್ಷಣೆ ಮಾಡಿ ಕುದೇರು ಗ್ರಾಮದ ಬಳಿ ಲಂಚ ಸ್ವೀಕರಿಸುತ್ತಿದ್ದರು. ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಇಂಜಿನಿಯರ್ ಗಳಿಬ್ಬರ ವಿರುದ್ದ ದೂರು ದಾಖಲಿಸಿರುವುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!