ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್ನ ಸುನೀಲ್ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಶುಕ್ರವಾರ ಸಂಜೆ ಇಂಜಿನಿಯರ್ ಗಳಿಬ್ಬರು ಕಾಮಗಾರಿ ವೀಕ್ಷಣೆ ಮಾಡಿ ಕುದೇರು ಗ್ರಾಮದ ಬಳಿ ಲಂಚ ಸ್ವೀಕರಿಸುತ್ತಿದ್ದರು. ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಇಂಜಿನಿಯರ್ ಗಳಿಬ್ಬರ ವಿರುದ್ದ ದೂರು ದಾಖಲಿಸಿರುವುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…