ಚಾಮರಾಜನಗರ : ಶಾಲಾ ಕಟ್ಟಡ ಕಾಮಗಾರಿ ಮಾಡಿದ್ದ ಗುತ್ತಿಗೆದಾರರಿಗೆ ಬಿಲ್ ಮಂಜೂರು ಮಾಡಿಕೊಡಲು 30 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗಳು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ನಗರದ ಲೋಕೋಪಯೋಗಿ ಇಲಾಖೆ ಸಹಾಯಕ ಇಂಜಿನಿಯರ್ (ಎಇ) ಮಧುಸೂದನ್ ಹಾಗೂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ (ಎಇಇ) ಕೆಂಪರಾಜು ಅವರು ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದು, ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ತಾಲೂಕಿನ ಬಾಗಳಿ ಗ್ರಾಮದ ಸರ್ಕಾರಿ ಶಾಲೆಯ ಕಟ್ಟಡದ ಕಾಮಗಾರಿಯನ್ನು ಸೂರ್ಯ ಬಿಲ್ಡರ್ನ ಸುನೀಲ್ಕುಮಾರ್ ಎಂಬ ಗುತ್ತಿಗೆದಾರರು ನಿರ್ವಹಿಸಿದ್ದರು. ಈ ಕಾಮಗಾರಿಯ ಬಿಲ್ ಹಣವನ್ನು ಮಂಜೂರು ಮಾಡಿಕೊಡಲು ಇಬ್ಬರೂ ಅಧಿಕಾರಿಗಳು ಸುನೀಲ್ ಕುಮಾರ್ ಅವರಿಂದ 30 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಶುಕ್ರವಾರ ಸಂಜೆ ಇಂಜಿನಿಯರ್ ಗಳಿಬ್ಬರು ಕಾಮಗಾರಿ ವೀಕ್ಷಣೆ ಮಾಡಿ ಕುದೇರು ಗ್ರಾಮದ ಬಳಿ ಲಂಚ ಸ್ವೀಕರಿಸುತ್ತಿದ್ದರು. ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಇಬ್ಬರನ್ನೂ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಇಂಜಿನಿಯರ್ ಗಳಿಬ್ಬರ ವಿರುದ್ದ ದೂರು ದಾಖಲಿಸಿರುವುದಾಗಿ ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.
ಕುಶಾಲನಗರ: ಕಾವೇರಿ ನದಿಗೆ ಇಳಿದ ನಾಗಲ್ಯಾಂಡ್ ಮೂಲದ ಇಬ್ಬರು ಯುವಕರು ನಾಪತ್ತೆಯಾಗಿರುವ ಘಟನೆ ಕುಶಾಲನಗರ ರಸೂಲ್ ಲೇಔಟ್ ಬಳಿ ಬುಧವಾರ…
ಕಾಬೂಲ್ : ಪಾಕಿಸ್ತಾನವು ಬುಧವಾರ ನಡೆಸಿದ ಹೊಸ ವಾಯುದಾಳಿಗಳಲ್ಲಿ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ತಿಳಿಸಿದೆ. ಪಾಕ್…
ಚೆನ್ನೈ : ತಮಿಳಿನ ಖ್ಯಾತ ನಿರ್ದೇಶಕ, ಪದ್ಮಶ್ರೀ ಭಾರತಿರಾಜ್ ನಿಧನಕ್ಕೆ ಹೆಸರಾಂತ ನಟರು ಕಂಬನಿ ಮಿಡಿದಿದ್ದಾರೆ. ಅವರ ಅಂತಿಮ ದರ್ಶನಕ್ಕೆ…
ವರುಣ : ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪನವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ದಲಿತ ಸಂಘಟನೆಗಳ…
ಮೈಸೂರು : ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಕೇಂದ್ರ ಸರ್ಕಾರದೊಂದಿಗೆ ಸೌಹಾರ್ದದಿಂದ ಸಂಪರ್ಕ ಸಾಧಿಸಿ ರಾಜ್ಯದ ಅಭಿವೃದ್ಧಿ…
ಬೆಂಗಳೂರು: ರಾಜ್ಯಸಭಾ ಸ್ಥಾನಕ್ಕೆ ಟಿಕೆಟ್ ತಪ್ಪಿದೆ ಎಂಬ ಕಾರಣದಿಂದ ನನ್ನ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಸಂಬಂಧ…