ಚಾಮರಾಜನಗರ

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳಿಗೆ ತಾಜಾ ತರಕಾರಿ, ಆಹಾರ ಪದಾರ್ಥಗಳನ್ನು ಬಳಸಿ ಗುಣಮಟ್ಟದ ಪ್ರಸಾದ ವಿತರಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.

ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೇ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು.

ಪರಿಶೀಲನೆ ವೇಳೆ ದಾಸೋಹ ಭವನದ ಮೇಲುಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

7 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

8 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

9 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

12 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

13 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

13 hours ago