ಚಾಮರಾಜನಗರ

ಮಹದೇಶ್ವರ ಬೆಟ್ಟ| ಭಕ್ತರಿಗೆ ಗುಣಮಟ್ಟದ ಪ್ರಸಾದ ವಿತರಿಸಬೇಕು: ಎ.ಈ.ರಘು ಖಡಕ್‌ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳಿಗೆ ತಾಜಾ ತರಕಾರಿ, ಆಹಾರ ಪದಾರ್ಥಗಳನ್ನು ಬಳಸಿ ಗುಣಮಟ್ಟದ ಪ್ರಸಾದ ವಿತರಿಸಬೇಕು ಎಂದು ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ದಾಸೋಹ ಸಿಬ್ಬಂದಿ ವರ್ಗದವರಿಗೆ ಸೂಚನೆ ನೀಡಿದರು.

ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆಯ ತಮಿಳುನಾಡು ರಾಜ್ಯದಿಂದ ಲಕ್ಷಾಂತರ ಸಂಖ್ಯೆಯಲ್ಲಿ ಭೇಟಿ ನೀಡುತ್ತಿದ್ದಾರೆ. ಭಕ್ತಾದಿಗಳು ಶ್ರೀ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರ ಪ್ರಸಾದ ಸ್ವೀಕರಿಸುವುದು ವಾಡಿಕೆ ಅದರಂತೆ ಪ್ರಾಧಿಕಾರದ ಕಾರ್ಯದರ್ಶಿ ಎ.ಈ ರಘು ದಾಸೋಹ ಭವನಕ್ಕೆ ಭೇಟಿ ನೀಡಿ ಭಕ್ತರಿಗೆ ನೀಡಲು ತಯಾರಿಸಿದ ಪ್ರಸಾದವನ್ನು ಪರಿಶೀಲನೆ ನಡೆಸಿದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಬರುವ ಮಾದಪ್ಪನ ಭಕ್ತಾದಿಗಳಿಗೆ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರತಿನಿತ್ಯ ಬೆಳಗ್ಗೆ, ಮಧ್ಯಾಹ್ನ, ಸಾಯಂಕಾಲ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಜಾತ್ರಾ ಸಂದರ್ಭದಲ್ಲಿ ವಿಶೇಷ ದಾಸೋಹ ತೆರೆದು ತರಕಾರಿ ಬಾತ್, ಮೊಸರುಬಜ್ಜಿ, ಬಿಸಿಬೇಳೆ ಬಾತ್, ಪುಳಿಯೋಗರೆ ಚಟ್ನಿ ವಿತರಣೆ ಮಾಡಲಾಗುತ್ತಿದೆ. ದಾಸೋಹ ಭವನದಲ್ಲಿ ಅನ್ನ ಸಾಂಬಾರ್, ರಸಂ ಮಜ್ಜಿಗೆ ಕೂಟು, ಪೊಂಗಲ್ ಹುಳಿ ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಒಟ್ಟಾರೆ ಶ್ರೀ ಕ್ಷೇತ್ರಕ್ಕೆ ಬರುವ ಭಕ್ತಾದಿಗಳಿಗೆ ಗುಣಮಟ್ಟ ಪ್ರಸಾದ ವಿತರಿಸುವುದೇ ಪ್ರಾಧಿಕಾರದ ಉದ್ದೇಶವಾಗಿದೆ ಎಂದರು.

ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಇದುವರೆಗೂ ಸುಮಾರು 4 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಪ್ರಸಾದ ಸ್ವೀಕರಿಸಿದ್ದಾರೆ. ಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಬರುವ ಪಾದಯಾತ್ರಿಕರಿಗೆ ದಾನಿಗಳು ಪರ ಮಾಡುವುದರಿಂದ ದಾಸೋಹ ಭವನಕ್ಕೆ ಬರುವ ಭಕ್ತಾದಿಗಳ ಸಂಖ್ಯೆಯು ಕಡಿಮೆ ಇರುತ್ತದೆ ಎಂದು ತಿಳಿಸಿದರು.

ಪರಿಶೀಲನೆ ವೇಳೆ ದಾಸೋಹ ಭವನದ ಮೇಲುಸ್ತುವಾರಿ ಮಲ್ಲಿಕಾರ್ಜುನ್, ಅಡುಗೆ ಸಿಬ್ಬಂದಿ ವರ್ಗದವರು ಆಪ್ತ ಸಹಾಯಕ ರವೀಂದ್ರ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago