ಚಾಮರಾಜನಗರ

ಹೊಗೇನಕಲ್‌ ಫಾಲ್ಸ್‌ನಲ್ಲಿ ಮತ್ತೆ ತೆಪ್ಪ ಸಂಚಾರ

ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ.

ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಸೋಮವಾರ ಕರೆದುಕೊಂಡು ಹೋಗಿದ್ದಾಗ ತಮಿಳುನಾಡು ಪೊಲೀಸರು ತೆಪ್ಪ ಓಡಿಸುವವರಿಂದ ಮೊಬೈಲ್ ಹಾಗೂ ವುಟ್ಟು ಕಿತ್ತುಕೊಂಡಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ತೆಪ್ಪ ಒಡಿಸುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಮಧ್ಯಾಹದಿಂದಲೇ ತೆಪ್ಪ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.

ಇದರಿಂದ ಎಚ್ಚೆತ್ತ ಅಧಿಕಾರಿಗಳು ಮಂಗಳವಾರ ತಮಿಳುನಾಡು ಡಿವೈಎಸ್‌ಪಿ ಜುಂಸುಂದರ್, ಇನ್‌ಸ್ಪೆಕ್ಟರ್ ಮುರಳಿ, ಗೋಪಿನಾಥಂ, ಡಿಆರ್‌ಎಫ್ ದಿನೇಶ್, ಮಲೆ ಮಹದೇಶ್ವರ ಬೆಟ್ಟದ ಮುಖ್ಯಪೇದೆ ಮುರುಗೇಶ್ ಹಾಗೂ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ಸಭೆ ನಡೆಸಿ ರಾಜಿ ಮಾಡಲಾಗಿದೆ.

ಸಭೆಯಲ್ಲಿ ತಮಿಳುನಾಡಿನ ಡಿವೈಎಸ್ಪಿ ಜೈಸುಂದರ್ ಮಾತನಾಡಿ, ಹೊಗೇನಕಲ್ ಜಲಪಾತ ವೀಕ್ಷಿಸಲು ಬರುವ ವೇಳೆಯಲ್ಲಿ ಪ್ರವಾಸಿಗರು ಜಲಪಾತದ ಬಳಿ ಸೆಲ್ಛಿ ತೆಗೆದುಕೊಳ್ಳಲು ಹೋಗುವ ವೇಳೆ ಜಾರಿ ಜಲಪಾತಕ್ಕೆ ಬಿದ್ದು ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಮಿಳುನಾಡಿನ ಭಾಗದಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರವಾಸಿಗರನ್ನು ಕರೆದುಕೊಂಡು ಮತ್ತೆ ಸುರಕ್ಷಿತವಾಗಿ ಕರೆತಂದು ಬಿಡುವುದು ತೆಪ್ಪ ನಡೆಸುವವರ ಜವಾಬ್ದಾರಿಯಾಗಿದೆ. ಮುಂದೆ ಇಂತಹ ಘಟನೆಗಳಿಗೆ ಅವಕಾಶ ಮಾಡಿಕೊಡದೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ ನಂತರ ಮತ್ತೆ ತೆಪ್ಪ ಸಂಚಾರ ಪ್ರಾರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

8 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

9 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

9 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

9 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

9 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

9 hours ago