ಹನೂರು: ತಮಿಳುನಾಡು, ಕರ್ನಾಟಕ ರಾಜ್ಯಗಳ ಅಧಿಕಾರಿಗಳ ಸಂಧಾನದಿಂದ ಕರ್ನಾಟಕ ಭಾಗದಲ್ಲಿ ಮತ್ತೆ ತೆಪ್ಪ ನಡೆಸಲು ತೆಪ್ಪ ಓಡಿಸುವವರು ಸಮ್ಮತಿಸಿದ್ದು, ವಿವಾದಕ್ಕೆ ತೆರೆ ಎಳೆದಂತಾಗಿದೆ.
ಹೊಗೇನಕಲ್ ಜಲಪಾತ ವೀಕ್ಷಣೆಗೆ ಪ್ರವಾಸಿಗರನ್ನು ಸೋಮವಾರ ಕರೆದುಕೊಂಡು ಹೋಗಿದ್ದಾಗ ತಮಿಳುನಾಡು ಪೊಲೀಸರು ತೆಪ್ಪ ಓಡಿಸುವವರಿಂದ ಮೊಬೈಲ್ ಹಾಗೂ ವುಟ್ಟು ಕಿತ್ತುಕೊಂಡಿದ್ದಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಈ ಹಿನ್ನೆಲೆಯಲ್ಲಿ ತೆಪ್ಪ ಒಡಿಸುವವರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ಸೋಮವಾರ ಮಧ್ಯಾಹದಿಂದಲೇ ತೆಪ್ಪ ಸಂಚಾರ ಸ್ಥಗಿತಗೊಳಿಸಿ ಆಕ್ರೋಶ ವ್ಯಕ್ತಪಡಿಸಿದ್ದರು.
ಇದರಿಂದ ಎಚ್ಚೆತ್ತ ಅಧಿಕಾರಿಗಳು ಮಂಗಳವಾರ ತಮಿಳುನಾಡು ಡಿವೈಎಸ್ಪಿ ಜುಂಸುಂದರ್, ಇನ್ಸ್ಪೆಕ್ಟರ್ ಮುರಳಿ, ಗೋಪಿನಾಥಂ, ಡಿಆರ್ಎಫ್ ದಿನೇಶ್, ಮಲೆ ಮಹದೇಶ್ವರ ಬೆಟ್ಟದ ಮುಖ್ಯಪೇದೆ ಮುರುಗೇಶ್ ಹಾಗೂ ಪೊಲೀಸ್ ಸಿಬ್ಬಂದಿ ನೇತೃತ್ವದಲ್ಲಿ ಸಭೆ ನಡೆಸಿ ರಾಜಿ ಮಾಡಲಾಗಿದೆ.
ಸಭೆಯಲ್ಲಿ ತಮಿಳುನಾಡಿನ ಡಿವೈಎಸ್ಪಿ ಜೈಸುಂದರ್ ಮಾತನಾಡಿ, ಹೊಗೇನಕಲ್ ಜಲಪಾತ ವೀಕ್ಷಿಸಲು ಬರುವ ವೇಳೆಯಲ್ಲಿ ಪ್ರವಾಸಿಗರು ಜಲಪಾತದ ಬಳಿ ಸೆಲ್ಛಿ ತೆಗೆದುಕೊಳ್ಳಲು ಹೋಗುವ ವೇಳೆ ಜಾರಿ ಜಲಪಾತಕ್ಕೆ ಬಿದ್ದು ಅನಾಹುತ ಸಂಭವಿಸಬಹುದು ಎಂಬ ಕಾರಣಕ್ಕೆ ತಮಿಳುನಾಡಿನ ಭಾಗದಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಪ್ರವಾಸಿಗರನ್ನು ಕರೆದುಕೊಂಡು ಮತ್ತೆ ಸುರಕ್ಷಿತವಾಗಿ ಕರೆತಂದು ಬಿಡುವುದು ತೆಪ್ಪ ನಡೆಸುವವರ ಜವಾಬ್ದಾರಿಯಾಗಿದೆ. ಮುಂದೆ ಇಂತಹ ಘಟನೆಗಳಿಗೆ ಅವಕಾಶ ಮಾಡಿಕೊಡದೆ ಕ್ರಮ ವಹಿಸುವುದಾಗಿ ಭರವಸೆ ನೀಡಿದ ನಂತರ ಮತ್ತೆ ತೆಪ್ಪ ಸಂಚಾರ ಪ್ರಾರಂಭವಾಗಿದೆ.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…