Mysore
32
clear sky

Social Media

ಗುರುವಾರ, 13 ಮಾರ್ಚ್ 2025
Light
Dark

ಕುಟುಂಬ ಸಮೇತ ಮಲೆ ಮಹದೇಶ್ವರನ ದರ್ಶನ ಪಡೆದ ರಾಘವೇಂದ್ರ ರಾಜ್​ಕುಮಾರ್

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಇಂದು ನಟ ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದ್ದಾರೆ. ಪತ್ನಿ ಮಂಗಳಾ, ಕಿರಿಯ ಪುತ್ರ ಯುವ ರಾಜ್​ಕುಮಾರ್ ರಾಘವೇಂದ್ರ ರಾಜ್​ಕುಮಾರ್ ಸಾಥ್ ನೀಡಿದ್ದಾರೆ. ದಾಸೋಹ ಭವನದಲ್ಲಿ ಅವರು ಪ್ರಸಾದ ಸೇವಿಸಿದ್ದಾರೆ. ಮಲೆ ಮಹದೇಶ್ವರನ ತಾಣ ನಮಗೆ ಸ್ವರ್ಗದಂತೆ ಭಾಸವಾಗುತ್ತಿದೆ. ವರ್ಷಕ್ಕೆ ಒಮ್ಮೆಯಾದರೂ ಬರಬೇಕು ಅನಿಸುತ್ತದೆ. ನಮ್ಮ ತಂದೆ ರಾಜಕುಮಾರ್ ಅವರು ಒಂದು ಸಲ ಇಲ್ಲಿಗೆ ಕರೆದುಕೊಂಡು ಬಂದಿದ್ದರು. ಆ ಮೇಲೆ ಇಲ್ಲಿಗೆ ನಾನು ಬಂದಿರಲಿಲ್ಲ ಎಂದು ರಾಘವೇಂದ್ರ ರಾಜ್​ಕುಮಾರ್ ಹೇಳಿದ್ದಾರೆ.
 
Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ