ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ.
ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಎಸ್ ಐ ಈಶ್ವರ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ ರೋಡ್ ಸಮೀಪ ಸರಕು ಸಮೇತ ಆರೋಪಿಯನ್ನು ವಶಕ್ಕೆ ಪಡೆದು 6055 ರೂ ಮೌಲ್ಯದ ವಿವಿಧ ಕಂಪನಿಯ ಮದ್ಯದ ಪೌಚ್ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ದಾಳಿಯಲ್ಲಿ ಎಎಸ್ಐ ಮಹಾದೇವ ಸ್ವಾಮಿ, ಮುಖ್ಯಪೇದೆ ಸಿದ್ದೇಶ್, ಪೇದೆ ಮಹೇಂದ್ರ, ಚಾಲಕ ಪರಮೇಶ್ ಹಾಜರಿದ್ದರು.
ಢಾಕಾ: ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ರಾಷ್ಟ್ರೀಯತಾವಾದಿ ಪಕ್ಷದ ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಫೆಬ್ರವರಿ.17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪತ್ನಿ ಉಷಾ…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…