ಚಾಮರಾಜನಗರ

ಹನೂರು: ತಮಿಳುನಾಡಿಗೆ ಅಕ್ರಮ ಮದ್ಯ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡಿನ ಹಂದಿಯೂರು ಗ್ರಾಮದ ಕುಪ್ಪುಸ್ವಾಮಿ (53) ಬಂಧಿತ ಆರೋಪಿಯಾಗಿದ್ದಾನೆ.

ಘಟನೆ ವಿವರ: ತಾಲೂಕಿನ ಮಾರ್ಟಳ್ಳಿ ಗ್ರಾಮದಿಂದ ತಮಿಳುನಾಡಿಗೆ ಕಾರಿನಲ್ಲಿ ಅಕ್ರಮ ಮದ್ಯ ಸಾಗಣೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ರಾಮಾಪುರ ಪೊಲೀಸ್ ಠಾಣೆಯ ಎಸ್ ಐ ಈಶ್ವರ ಹಾಗೂ ಸಿಬ್ಬಂದಿ ವರ್ಗ ದಾಳಿ ನಡೆಸಿ ನಾಲ್ ರೋಡ್ ಸಮೀಪ ಸರಕು ಸಮೇತ ಆರೋಪಿಯನ್ನು ವಶಕ್ಕೆ ಪಡೆದು 6055 ರೂ ಮೌಲ್ಯದ ವಿವಿಧ ಕಂಪನಿಯ ಮದ್ಯದ ಪೌಚ್‌ಗಳನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ದಾಳಿಯಲ್ಲಿ ಎಎಸ್ಐ ಮಹಾದೇವ ಸ್ವಾಮಿ, ಮುಖ್ಯಪೇದೆ ಸಿದ್ದೇಶ್, ಪೇದೆ ಮಹೇಂದ್ರ, ಚಾಲಕ ಪರಮೇಶ್ ಹಾಜರಿದ್ದರು.

AddThis Website Tools
ಮಹಾದೇಶ್ ಎಂ ಗೌಡ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಹನೂರು ಪಟ್ಟಣದವನಾದ ನಾನು ಪಟ್ಟಣದ ಕ್ರಿಸ್ತರಾಜ ಪ್ರೌಢಶಾಲೆಯಲ್ಲಿ 10ನೇ ತರಗತಿ ವಿದ್ಯಾಭ್ಯಾಸ ಮಾಡಿದ್ದು ಕಳೆದ 11 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಕೆಲಸ ಮಾಡುತ್ತಿದ್ದೇನೆ. ರಾಜ್ಯಮಟ್ಟದ ವಿಶ್ವವಾಣಿ, ಜಿಲ್ಲಾ ಮಟ್ಟದ ಸುದ್ದಿ ಬುದ್ಧಿ ಪತ್ರಿಕೆಯಲ್ಲಿ ನಾಲ್ಕು ವರ್ಷ ತಾಲೂಕು ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಕಳೆದ ಹತ್ತು ವರ್ಷಗಳಿಂದ ಆಂದೋಲನ ದಿನಪತ್ರಿಕೆಯಲ್ಲಿ ಹನೂರು ತಾಲೂಕು ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ.

Recent Posts

ಅರವತ್ತಕ್ಕೆ ಮತ್ತೆ ನೀ ಅರಳು

 - ಸೌಮ್ಯಕೋಠಿ, ಮೈಸೂರು ಸಾಮಾನ್ಯವಾಗಿ 60 ವರ್ಷವಾಯಿತು, ನಿವೃತ್ತಿ ಯಾಯಿತು ಎಂದರೆ ಜೀವನವೇ ಮುಗಿದು ಹೋಯಿತು ಎನ್ನುವಂತಹ ಮನಸ್ಥಿತಿ ಮೊದಲಿತ್ತು.…

5 mins ago

ಭಯೋತ್ಪಾದಕ ದಾಳಿಗೆ ಬಿಜೆಪಿ ಕಾರಣ

ಮಂಡ್ಯ : ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಭೀಕರ ಹಿಂದೂಗಳ ಹತ್ಯೆಗೆ ಬಿಜೆಪಿಯೇ ಕಾರಣ ಎಂದು ಶ್ರೀರಂಗಪಟ್ಟಣದಲ್ಲಿ ಶಾಸಕ ರಮೇಶ್…

19 mins ago

Cyber Crime; ಸೈಬರ್ ಅಪರಾಧ ತಡೆಗೆ ಸೂಕ್ತ ಕ್ರಮ ; ಸಹಾಯವಾಣಿ-1930, ವೆಬ್ ಬಾಟ್ ಉನ್ನತೀಕರಣ

ಬೆಂಗಳೂರು : ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್‍ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ (Cyber Crime) ಸಹಾಯವಾಣಿ-1930…

42 mins ago

ಭಯೋತ್ಪಾದಕ ದಾಳಿ : ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಭಯೋತ್ಪಾದಕರು ಪ್ರವಾಸಿಗರನ್ನು ಗುರಿಯಾಗಿಸಿಕೊಂಡು 28 ಮಂದಿ ಮೇಲೆ ದಾಳಿ ಸಾವಿಗೆ ಕಾರಣರಾಗಿದ್ದಾರೆ.…

1 hour ago

ಓದುಗರ ಪತ್ರ | ಕಸಾಪ ರಾಜ್ಯಾಧ್ಯಕ್ಷರ ಸರ್ವಾಧಿಕಾರಿ ನಡೆ ತರವಲ್ಲ

ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಘಟಕದ ಅಧ್ಯಕ್ಷರಾದ ಮಹೇಶ್ ಜೋಶಿ ಅವರು, ತಾವು ಅಧ್ಯಕ್ಷರಾದ ನಂತರ ತಮ್ಮ ಅನುಕೂಲಕ್ಕೆ ತಕ್ಕಂತೆ…

2 hours ago

ಓದುಗರ ಪತ್ರ | ಕಿಡಿಗೇಡಿಗಳಿಗೆ ತಕ್ಕ ಪಾಠ ಕಲಿಸಿ

ಡಾ. ಬಿ. ಆರ್. ಅಂಬೇಡ್ಕರ್ ಅವರು ವಿಶ್ವದಲ್ಲೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ಕಲ್ಪಿಸಿದ್ದಾರೆ. ಹಿಂದುಳಿದ…

2 hours ago